Homeಮುಖಪುಟಟ್ವಿಟರ್‌ ಖಾತೆ ಸ್ಥಗಿತ: 'ಪ್ರಜಾಪ್ರಭುತ್ವದ ಮೇಲಿನ ದಾಳಿ' ಎಂದ ರಾಹುಲ್ ಗಾಂಧಿ

ಟ್ವಿಟರ್‌ ಖಾತೆ ಸ್ಥಗಿತ: ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಿರುವ ಕಂಪನಿ ವಿರುದ್ಧ ತಿರುಗಿ ಬಿದ್ದಿರುವ ಅವರು, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕಿಡಿ ಕಾರಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 9 ವರ್ಷದ ದಲಿತ ಬಾಲಕಿಯ ಕುಟುಂಬದೊಂದಿಗೆ ರಾಹುಲ್ ಗಾಂಧಿ ಮಾತನಾಡುತ್ತಿರುವ ಫೋಟೋಗಳನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ ಮತ್ತು ಇತರ ಹಲವು ಕಾಂಗ್ರೆಸ್ ನಾಯಕರ ಟ್ವಿಟರ್ ಹ್ಯಾಂಡಲ್‌ಗಳನ್ನು ಸ್ಥಗಿತ ಮಾಡಲಾಗಿದೆ.

“ಟ್ವಿಟರ್‌ ಖಾತೆ ನಿರ್ಬಂಧ ರಾಹುಲ್ ಗಾಂಧಿಯ ಮೇಲಿನ ದಾಳಿ ಅಲ್ಲ. ನಾನು 19 ರಿಂದ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದೇನೆ. ನೀವು ಅವರ ಅಭಿಪ್ರಾಯದ ಹಕ್ಕನ್ನು ಕೂಡ ನಿರಾಕರಿಸುತ್ತಿದ್ದೀರಿ” ಎಂದು ರಾಹುಲ್ ಗಾಂಧಿ ಯೂಟ್ಯೂಬ್ ವಿಡಿಯೊ ಮೂಲಕ ಹೇಳಿದ್ದಾರೆ.

“ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು ಕಂಪನಿ ಪ್ರಯತ್ನಿಸುತ್ತಿದೆ. ರಾಜಕೀಯ ಪ್ರಕ್ರಿಯೆಯಲ್ಲಿ ಕಂಪನಿ ಹಸ್ತಕ್ಷೇಪ ಮಾಡುತ್ತಿದೆ. ಒಬ್ಬ ರಾಜಕಾರಣಿಯಾಗಿ ನಾನು ಅದನ್ನು ಇಷ್ಟಪಡುವುದಿಲ್ಲ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ” ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ಟ್ವಿಟ್ಟರ್ ಕಂಪನಿಯನ್ನು ಪಕ್ಷಪಾತಿ ಎಂದು ಕರೆದಿರುವ ರಾಹುಲ್ ಗಾಂಧಿ, “ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿಯಾಗುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಅವಕಾಶವಿಲ್ಲ. ಮಾಧ್ಯಮವನ್ನು ನಿಯಂತ್ರಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಾವು ಟ್ವಿಟರ್‌ನಲ್ಲಿ ನಮ್ಮ ಆಲೋಚನೆಗಳನ್ನು ಹಾಕಬಹುದು ಎಂದು ನಾನು ಭಾವಿಸಿದೆ. ಆದರೆ ಅದು ಸಾಧ್ಯವಿಲ್ಲ. ಟ್ವಿಟರ್ ವಾಸ್ತವವಾಗಿ ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಅದು ಸರ್ಕಾರ ಹೇಳುವುದನ್ನು ಕೇಳುತ್ತದೆ” ಎಂದು ಆರೋಪಿಸಿದ್ದಾರೆ.

ಆದರೆ ಟ್ವಿಟರ್‌ ಮಾತ್ರ, ತಾನು ತನ್ನ ನಿಯಮಗಳನ್ನು “ಎಲ್ಲರಿಗೂ ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಜಾರಿಗೊಳಿಸಿದೆ” ಎಂದು ಹೇಳಿದೆ.  “ನಮ್ಮ ನಿಯಮಗಳನ್ನು ಉಲ್ಲಂಘಿಸುವ ಚಿತ್ರವನ್ನು ಪೋಸ್ಟ್ ಮಾಡಿದ ನೂರಾರು ಟ್ವೀಟ್‌ಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಇತ್ತ ರಾಹುಲ್ ಗಾಂಧಿಗೆ ಬೆಂಬಲವಾಗಿ ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಹೆಸರು ಮತ್ತು ಫೋಟೋವನ್ನು ಬದಲಿಸಿದ್ದಾರೆ. ತಮ್ಮ ಹೆಸರು ಮತ್ತು ಫೋಟೋ ಬದಲು ರಾಹುಲ್ ಗಾಂಧಿ ಫೋಟೋ ಹಾಕಿ ಬೆಂಬಲ ತೋರಿಸಿದ್ದಾರೆ.

ಕಾಂಗ್ರೆಸ್ ಯುವ ಘಟಕದ ಟ್ವಿಟರ್‌ ಖಾತೆಗಳಲ್ಲಿ ರಾಹುಲ್ ಗಾಂಧಿಯ ಪ್ರೋಫೈಲ್‌ ಚಿತ್ರವನ್ನು ಹಾಕಿಕೊಂಡಿರುವುದು.

ಟ್ವಿಟರ್‌ ಖಾತೆ ಸ್ಥಗಿತಗೊಳಿಸಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತು

 

ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...