Homeಅಂತರಾಷ್ಟ್ರೀಯಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮಂಗಳವಾರ ದೋಹಾದಲ್ಲಿ ಹಮಾಸ್ ನಾಯಕರ ವಿರುದ್ಧ ಇಸ್ರೇಲ್ ಸೇನೆ ದಾಳಿ ನಡೆಸಿದೆ ಎಂದು ದೃಢಪಡಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿರುವ ಮತ್ತು ಈ ಪ್ರದೇಶದ ಅತಿದೊಡ್ಡ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿರುವ ಕತಾರ್ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇಸ್ರೇಲ್ ಕೃತ್ಯ ಕತಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ‘ಸ್ಪಷ್ಟ ಉಲ್ಲಂಘನೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಗಾಝಾ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು, ಬದಲಾಗಿ ಗಾಝಾದ ಭವಿಷ್ಯವನ್ನು ನಾಶ ಮಾಡಬಾರದು ಎಂದು ಗುಟೆರೆಸ್ ಹೇಳಿದ್ದಾರೆ.

“ದುರದೃಷ್ಟವಶಾತ್ ಕತಾರ್ ರಾಜಧಾನಿ ದೋಹಾದ ಒಂದು ಭಾಗದಲ್ಲಿ ನೆಲೆಗೊಂಡಿದ್ದ” ಹಮಾಸ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಮಿಲಿಟರಿಯಿಂದ ಟ್ರಂಪ್ ಆಡಳಿತಕ್ಕೆ ತಿಳಿಸಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಾರ್ವಭೌಮ ರಾಷ್ಟ್ರ, ಅಮೆರಿಕದ ಆಪ್ತ ಮಿತ್ರ ಹಾಗೂ ಶಾಂತಿ ಸ್ಥಾಪನೆಗಾಗಿ ನಮ್ಮೊಂದಿಗೆ ಕಠಿಣ ಪರಿಶ್ರಮಪಡುತ್ತಿರುವ, ಧೈರ್ಯದಿಂದ ಅಪಾಯಗಳನ್ನು ಎದುರಿಸುತ್ತಿರುವ ರಾಷ್ಟ್ರವಾದ ಕತಾರ್ ಒಳಗೆ ಏಕಪಕ್ಷೀಯವಾಗಿ ಬಾಂಬ್ ದಾಳಿ ನಡೆಸುವುದು ಅಮೆರಿಕ ಶಾಂತಿ ಸ್ಥಾಪನೆಯ ಗುರಿಯನ್ನು ಸಾಧಿಸಲು ಅಡ್ಡಿಯಾಗಲಿದೆ ಎಂದು ಕರೋಲಿನ್ ಲೀವಿಟ್ ಹೇಳಿದ್ದಾರೆ.

ಆದಾಗ್ಯೂ, ಗಾಝಾದ ಜನರ ದುಃಖದಿಂದ ಲಾಭ ಪಡೆದಿರುವ ಹಮಾಸ್ ಅನ್ನು ನಿರ್ಮೂಲನೆ ಮಾಡುವುದು ಯೋಗ್ಯ ಗುರಿಯಾಗಿದೆ ಎಂದಿದ್ದಾರೆ. 

ಸೌದಿ ಅರೇಬಿಯಾ ಕೂಡ ಇಸ್ರೇಲ್ ದಾಳಿಯನ್ನು ‘ಕ್ರೂರ ಆಕ್ರಮಣ’ ಎಂದಿದ್ದು, ಮಿತ್ರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸೌದಿ ವಿದೇಶಾಂಗ ಸಚಿವಾಲಯ ‘ಕತಾರ್ ಜೊತೆ ಒಗ್ಗಟ್ಟು’ ಪ್ರದರ್ಶಿಸಿದೆ.

ಟರ್ಕಿ, ಕುವೈತ್, ಯುಎಇ, ಜೋರ್ಡಾನ್, ಇರಾನ್, ಇರಾಕ್, ಪ್ಯಾಲೆಸ್ತೀನ್, ಯೆಮನ್‌ನ ಹೌತಿ ಗುಂಪು, ಮಾಲ್ಡೀವ್ಸ್, ಪಾಕಿಸ್ತಾನ, ಲೆಬನಾನ್, ಯುನೈಟೆಡ್ ಕಿಂಗ್‌ಡಂ, ಫ್ರಾನ್ಸ್‌, ಹಮಾಸ್, ಲೆಬನಾನ್, ಮೊರಾಕ್ಕೋ, ಸಿರಿಯಾ, ಸುಡಾನ್‌, ಈಜಿಪ್ಟ್, ಗಲ್ಫ್ ಕೋ ಆಪರೇಷನ್ ಕೌನ್ಸಿಲ್, ಅಲ್‌ಜೀರಿಯಾ, ಕಝಾಕಿಸ್ತಾನ್, ಸ್ಪೇನ್, ಲಿಬಿಯಾ, ಮಾರ್ಷಿಯಸ್, ಒಮಾನ್, ಇಟಲಿ, ಜರ್ಮನಿ, ಯುರೋಪ್ ಒಕ್ಕೂಟ, ಭಾರತ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ರಾಷ್ಟ್ರಗಳು ಮತ್ತು ಗುಂಪುಗಳು ಇಸ್ರೇಲ್ ದಾಳಿಯನ್ನು ಖಂಡಿಸಿವೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...