Homeಅಂತರಾಷ್ಟ್ರೀಯಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮಂಗಳವಾರ ದೋಹಾದಲ್ಲಿ ಹಮಾಸ್ ನಾಯಕರ ವಿರುದ್ಧ ಇಸ್ರೇಲ್ ಸೇನೆ ದಾಳಿ ನಡೆಸಿದೆ ಎಂದು ದೃಢಪಡಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿರುವ ಮತ್ತು ಈ ಪ್ರದೇಶದ ಅತಿದೊಡ್ಡ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿರುವ ಕತಾರ್ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇಸ್ರೇಲ್ ಕೃತ್ಯ ಕತಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ‘ಸ್ಪಷ್ಟ ಉಲ್ಲಂಘನೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಗಾಝಾ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು, ಬದಲಾಗಿ ಗಾಝಾದ ಭವಿಷ್ಯವನ್ನು ನಾಶ ಮಾಡಬಾರದು ಎಂದು ಗುಟೆರೆಸ್ ಹೇಳಿದ್ದಾರೆ.

“ದುರದೃಷ್ಟವಶಾತ್ ಕತಾರ್ ರಾಜಧಾನಿ ದೋಹಾದ ಒಂದು ಭಾಗದಲ್ಲಿ ನೆಲೆಗೊಂಡಿದ್ದ” ಹಮಾಸ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಮಿಲಿಟರಿಯಿಂದ ಟ್ರಂಪ್ ಆಡಳಿತಕ್ಕೆ ತಿಳಿಸಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಾರ್ವಭೌಮ ರಾಷ್ಟ್ರ, ಅಮೆರಿಕದ ಆಪ್ತ ಮಿತ್ರ ಹಾಗೂ ಶಾಂತಿ ಸ್ಥಾಪನೆಗಾಗಿ ನಮ್ಮೊಂದಿಗೆ ಕಠಿಣ ಪರಿಶ್ರಮಪಡುತ್ತಿರುವ, ಧೈರ್ಯದಿಂದ ಅಪಾಯಗಳನ್ನು ಎದುರಿಸುತ್ತಿರುವ ರಾಷ್ಟ್ರವಾದ ಕತಾರ್ ಒಳಗೆ ಏಕಪಕ್ಷೀಯವಾಗಿ ಬಾಂಬ್ ದಾಳಿ ನಡೆಸುವುದು ಅಮೆರಿಕ ಶಾಂತಿ ಸ್ಥಾಪನೆಯ ಗುರಿಯನ್ನು ಸಾಧಿಸಲು ಅಡ್ಡಿಯಾಗಲಿದೆ ಎಂದು ಕರೋಲಿನ್ ಲೀವಿಟ್ ಹೇಳಿದ್ದಾರೆ.

ಆದಾಗ್ಯೂ, ಗಾಝಾದ ಜನರ ದುಃಖದಿಂದ ಲಾಭ ಪಡೆದಿರುವ ಹಮಾಸ್ ಅನ್ನು ನಿರ್ಮೂಲನೆ ಮಾಡುವುದು ಯೋಗ್ಯ ಗುರಿಯಾಗಿದೆ ಎಂದಿದ್ದಾರೆ. 

ಸೌದಿ ಅರೇಬಿಯಾ ಕೂಡ ಇಸ್ರೇಲ್ ದಾಳಿಯನ್ನು ‘ಕ್ರೂರ ಆಕ್ರಮಣ’ ಎಂದಿದ್ದು, ಮಿತ್ರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸೌದಿ ವಿದೇಶಾಂಗ ಸಚಿವಾಲಯ ‘ಕತಾರ್ ಜೊತೆ ಒಗ್ಗಟ್ಟು’ ಪ್ರದರ್ಶಿಸಿದೆ.

ಟರ್ಕಿ, ಕುವೈತ್, ಯುಎಇ, ಜೋರ್ಡಾನ್, ಇರಾನ್, ಇರಾಕ್, ಪ್ಯಾಲೆಸ್ತೀನ್, ಯೆಮನ್‌ನ ಹೌತಿ ಗುಂಪು, ಮಾಲ್ಡೀವ್ಸ್, ಪಾಕಿಸ್ತಾನ, ಲೆಬನಾನ್, ಯುನೈಟೆಡ್ ಕಿಂಗ್‌ಡಂ, ಫ್ರಾನ್ಸ್‌, ಹಮಾಸ್, ಲೆಬನಾನ್, ಮೊರಾಕ್ಕೋ, ಸಿರಿಯಾ, ಸುಡಾನ್‌, ಈಜಿಪ್ಟ್, ಗಲ್ಫ್ ಕೋ ಆಪರೇಷನ್ ಕೌನ್ಸಿಲ್, ಅಲ್‌ಜೀರಿಯಾ, ಕಝಾಕಿಸ್ತಾನ್, ಸ್ಪೇನ್, ಲಿಬಿಯಾ, ಮಾರ್ಷಿಯಸ್, ಒಮಾನ್, ಇಟಲಿ, ಜರ್ಮನಿ, ಯುರೋಪ್ ಒಕ್ಕೂಟ, ಭಾರತ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ರಾಷ್ಟ್ರಗಳು ಮತ್ತು ಗುಂಪುಗಳು ಇಸ್ರೇಲ್ ದಾಳಿಯನ್ನು ಖಂಡಿಸಿವೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...