Homeಮುಖಪುಟಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪತ್ರಕರ್ತರ ಮೇಲಿನ FIR ಖಂಡಿಸಿದ ಎಡಿಟರ್ಸ್ ಗಿಲ್ಡ್

ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪತ್ರಕರ್ತರ ಮೇಲಿನ FIR ಖಂಡಿಸಿದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಜೂನ್ 05 ರಂದು ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ವರದಿ, ಟ್ವೀಟ್ ಮಾಡಿದ್ದಕ್ಕೆ ದಿ ವೈರ್ ಸೇರಿ ಹಲವು ಪತ್ರಕರ್ತರ ಮೇಲೆ ಉತ್ತರ ಪ್ರದೇಶದ ಪೊಲೀಸರು FIR ದಾಖಲಿಸಿರುವುದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬುವರು “ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು. ಜೈಶ್ರೀರಾಮ್, ವಂದೆ ಮಾತರಂ ಕೂಗುವಂತೆ ಒತ್ತಾಯಿಸಿ ಚಾಕುವಿನಲ್ಲಿ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.

ಇದನ್ನು ದಿ ವೈರ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆ ವಿಡಿಯೋವನ್ನು ಹಲವಾರು ಜನ ಟ್ವೀಟ್ ಮಾಡಿ ಖಂಡಿಸಿದ್ದರು. ಆದರೆ ಯುಪಿಯ ಗಾಜಿಯಾಬಾದ್‌ ಪೊಲೀಸರು “ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ. ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣ ಹಚ್ಚಿ ಟ್ವೀಟ್‌ ಮಾಡಿ ಸಮಾಜದ ಶಾಂತಿ ಕದಡಿದ್ದಾರೆ” ಎಂದು ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಹಿಂದೆಯೂ ಉತ್ತರ ಪ್ರದೇಶ ಪೊಲೀಸರು ಹಲವಾರು ಪತ್ರಕರ್ತರ ಮೇಲೆ ಎಫ್‌ಐಆರ್ ದಾಖಲಿಸಿದ ಟ್ರಾಕ್‌ ರೆಕಾರ್ಡ್ ಇದೆ. ಇದು ಸಮಾಜದ ಗಂಭೀರ ವಿಷಯಗಳ ಕುರಿತು ಯಾವುದೇ ಪ್ರತೀಕಾರದ ಭಯವಿಲ್ಲದೆ ಸ್ವಂತಂತ್ರವಾಗಿ ವರದಿ ಮಾಡದಂತೆ ಪತ್ರಕರ್ತರ ಮೇಲೆ ಒತ್ತಡ ತರುವಂತಿದೆ. ಮೂಲಗಳ ಆಧಾರದ ಮೇಲೆ ವರದಿ ಮಾಡುವುದು ಪತ್ರಕರ್ತರ ಕರ್ತವ್ಯ ಮತ್ತು ನಂತರ ಇತರ ಸಂಗತಿಗಳು, ಬೇರೆ ಆಯಾಮ ಕಂಡುಬಂದಲ್ಲಿ ಆ ಆವೃತ್ತಿಯನ್ನು ಸಹ ವರದಿ ಮಾಡುತ್ತಾರೆ. ಪತ್ರಕರ್ತರ ಇಂತಹ ವೃತ್ತಿಪರ ಕೆಲಸಗಳಿಗೆ ಅಡ್ಡಿಪಡಿಸಿ, ಅವರ ಮೇಲೆ ಅಪರಾಧವನ್ನು ಆರೋಪಿಸುವುದು ಸಾಂವಿಧಾನಿಕವಾಗಿ ಸಂರಕ್ಷಿಸಲ್ಪಟ್ಟ ಅವರ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗಿಲ್ಡ್ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ಆ ವಿಡಿಯೋವನ್ನು ಸಾವಿರಾರು ಮಾಧ್ಯಮಗಳು ಟ್ವೀಟ್ ಮಾಡಿದ್ದರೂ ಸಹ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ವಿಮರ್ಶಾತ್ಮಕ ಮನೋಭಾವ ಹೊಂದಿದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರನ್ನು ಮಾತ್ರ ಗುರಿಯಾಗಿಸಿ ಪೊಲೀಸರು ಪ್ರಕರಣ ದಾಖಲಿಸುವ ಮೂಕ ತಾರತಮ್ಯವೆಸಗಿದ್ದಾರೆ ಎಂದು ಗಿಲ್ಡ್ ಆರೋಪಿಸಿದೆ. ಸ್ವತಂತ್ರ ಮಾಧ್ಯಮಗಳಿಗೆ ಕಿರುಕುಳ ನೀಡಲು ವರದಿ ಮಾಡುವಿಕೆ ಮತ್ತು ಭಿನ್ನಾಭಿಪ್ರಾಯವನ್ನು ಅಪರಾಧೀಕರಿಸುವ ಕಾನೂನುಗಳ ದುರುಪಯೋಗವನ್ನು ಗಿಲ್ಡ್ ಖಂಡಿಸುತ್ತದೆ ಮತ್ತು ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸುತ್ತದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...