Homeಮುಖಪುಟಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪತ್ರಕರ್ತರ ಮೇಲಿನ FIR ಖಂಡಿಸಿದ ಎಡಿಟರ್ಸ್ ಗಿಲ್ಡ್

ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪತ್ರಕರ್ತರ ಮೇಲಿನ FIR ಖಂಡಿಸಿದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಜೂನ್ 05 ರಂದು ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ವರದಿ, ಟ್ವೀಟ್ ಮಾಡಿದ್ದಕ್ಕೆ ದಿ ವೈರ್ ಸೇರಿ ಹಲವು ಪತ್ರಕರ್ತರ ಮೇಲೆ ಉತ್ತರ ಪ್ರದೇಶದ ಪೊಲೀಸರು FIR ದಾಖಲಿಸಿರುವುದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬುವರು “ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು. ಜೈಶ್ರೀರಾಮ್, ವಂದೆ ಮಾತರಂ ಕೂಗುವಂತೆ ಒತ್ತಾಯಿಸಿ ಚಾಕುವಿನಲ್ಲಿ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು.

ಇದನ್ನು ದಿ ವೈರ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆ ವಿಡಿಯೋವನ್ನು ಹಲವಾರು ಜನ ಟ್ವೀಟ್ ಮಾಡಿ ಖಂಡಿಸಿದ್ದರು. ಆದರೆ ಯುಪಿಯ ಗಾಜಿಯಾಬಾದ್‌ ಪೊಲೀಸರು “ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ. ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣ ಹಚ್ಚಿ ಟ್ವೀಟ್‌ ಮಾಡಿ ಸಮಾಜದ ಶಾಂತಿ ಕದಡಿದ್ದಾರೆ” ಎಂದು ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಹಿಂದೆಯೂ ಉತ್ತರ ಪ್ರದೇಶ ಪೊಲೀಸರು ಹಲವಾರು ಪತ್ರಕರ್ತರ ಮೇಲೆ ಎಫ್‌ಐಆರ್ ದಾಖಲಿಸಿದ ಟ್ರಾಕ್‌ ರೆಕಾರ್ಡ್ ಇದೆ. ಇದು ಸಮಾಜದ ಗಂಭೀರ ವಿಷಯಗಳ ಕುರಿತು ಯಾವುದೇ ಪ್ರತೀಕಾರದ ಭಯವಿಲ್ಲದೆ ಸ್ವಂತಂತ್ರವಾಗಿ ವರದಿ ಮಾಡದಂತೆ ಪತ್ರಕರ್ತರ ಮೇಲೆ ಒತ್ತಡ ತರುವಂತಿದೆ. ಮೂಲಗಳ ಆಧಾರದ ಮೇಲೆ ವರದಿ ಮಾಡುವುದು ಪತ್ರಕರ್ತರ ಕರ್ತವ್ಯ ಮತ್ತು ನಂತರ ಇತರ ಸಂಗತಿಗಳು, ಬೇರೆ ಆಯಾಮ ಕಂಡುಬಂದಲ್ಲಿ ಆ ಆವೃತ್ತಿಯನ್ನು ಸಹ ವರದಿ ಮಾಡುತ್ತಾರೆ. ಪತ್ರಕರ್ತರ ಇಂತಹ ವೃತ್ತಿಪರ ಕೆಲಸಗಳಿಗೆ ಅಡ್ಡಿಪಡಿಸಿ, ಅವರ ಮೇಲೆ ಅಪರಾಧವನ್ನು ಆರೋಪಿಸುವುದು ಸಾಂವಿಧಾನಿಕವಾಗಿ ಸಂರಕ್ಷಿಸಲ್ಪಟ್ಟ ಅವರ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗಿಲ್ಡ್ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ಆ ವಿಡಿಯೋವನ್ನು ಸಾವಿರಾರು ಮಾಧ್ಯಮಗಳು ಟ್ವೀಟ್ ಮಾಡಿದ್ದರೂ ಸಹ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ವಿಮರ್ಶಾತ್ಮಕ ಮನೋಭಾವ ಹೊಂದಿದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರನ್ನು ಮಾತ್ರ ಗುರಿಯಾಗಿಸಿ ಪೊಲೀಸರು ಪ್ರಕರಣ ದಾಖಲಿಸುವ ಮೂಕ ತಾರತಮ್ಯವೆಸಗಿದ್ದಾರೆ ಎಂದು ಗಿಲ್ಡ್ ಆರೋಪಿಸಿದೆ. ಸ್ವತಂತ್ರ ಮಾಧ್ಯಮಗಳಿಗೆ ಕಿರುಕುಳ ನೀಡಲು ವರದಿ ಮಾಡುವಿಕೆ ಮತ್ತು ಭಿನ್ನಾಭಿಪ್ರಾಯವನ್ನು ಅಪರಾಧೀಕರಿಸುವ ಕಾನೂನುಗಳ ದುರುಪಯೋಗವನ್ನು ಗಿಲ್ಡ್ ಖಂಡಿಸುತ್ತದೆ ಮತ್ತು ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸುತ್ತದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...