Homeಮುಖಪುಟಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

ಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

- Advertisement -
- Advertisement -

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಮಿತ್ ಚೌಧರಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಡಿಯೋಲಿ ಉನಿಯಾರಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಬಂಧಿಸಲು ಪೊಲೀಸರು ಯತ್ನಿಸಿದ ನಂತರ ಬುಧವಾರ ತಡರಾತ್ರಿ ರಾಜಸ್ಥಾನದ ಟೋಂಕ್‌ನ ಸಮ್ರಾವತ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ. ಚುನಾವಣಾ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿದ್ದ ಅಮಿತ್ ಚೌಧರಿ ಅವರಿಗೆ ಮತಗಟ್ಟೆಯ ಹೊರಗೆ ಮೀನಾ ಅವರು ಹಲ್ಲೆ ನಡೆಸಿದ್ದರು. ಈ ವಿಡಿಯೊ ವೈರಲ್ ಆಗಿದೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪೊಲೀಸರು ಮೀನಾ ಅವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಂತೆ, ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆಕೋರರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕನಿಷ್ಠ 60 ಜನರನ್ನು ಬಂಧಿಸಲಾಗಿದೆ ಎಂದು ಅಜ್ಮೀರ್ ರೇಂಜ್ ಐಜಿ ಓಂ ಪ್ರಕಾಶ್ ಖಚಿತಪಡಿಸಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂಸಾಚಾರದ ವೇಳೆ ಉದ್ರಿಕ್ತ ಜನರು ಸುಮಾರು 24 ದೊಡ್ಡ ವಾಹನಗಳು ಮತ್ತು 48 ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ, ಶೋಧ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತುಕಡಿಗಳನ್ನು ಗುರುವಾರ ಮುಂಜಾನೆ ನಿಯೋಜಿಸಲಾಯಿತು ಎಂದು ವರದಿ ಹೇಳಿದೆ.

ಘಟನೆಗಳ ಬಗ್ಗೆ ವಿವರಿಸಿದ ಟೋಂಕ್ ಎಸ್ಪಿ ವಿಕಾಸ್ ಸಾಂಗ್ವಾನ್, “ಸಮ್ರಾವತ ಗ್ರಾಮದಲ್ಲಿ ಕೆಲವರು ಮತದಾನವನ್ನು ಬಹಿಷ್ಕರಿಸಿದ್ದಾರೆ. ಸಮಸ್ಯೆ ಬಗೆಹರಿಸಲು ಎಸ್‌ಡಿಎಂ, ತಹಸೀಲ್ದಾರ್‌, ಹೆಚ್ಚುವರಿ ಎಸ್‌ಪಿ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಮತಗಟ್ಟೆಗೆ ನುಗ್ಗಿ ಎಸ್‌ಡಿಎಂ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಹೆಚ್ಚುವರಿ ಎಸ್ಪಿ ಅವರನ್ನು ತಡೆದಿದ್ದಾರೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಮ್ಮ ಮಧ್ಯಸ್ಥಿಕೆಯ ನಂತರ ಮತದಾನ ಶಾಂತಿಯುತವಾಗಿ ಪುನರಾರಂಭವಾಯಿತು” ಎಂದು ಹೇಳಿದ್ದಾ ರೆ.

ಘಟನೆ ಬಗ್ಗೆ ಮಾತನಾಡಿರುವ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಈ ಹಿಂದೆ ಎಸ್‌ಡಿಎಂ ಅಮಿತ್ ಚೌಧರಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. “ಈ ಹಿಂದೆ ಹಿಂದೋಳಿಯಲ್ಲಿ ಎಸ್‌ಡಿಎಂ ಅಮಿತ್ ಅವರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಮಹಿಳೆಯ ಪತಿ ಮತ್ತು ಶಿಕ್ಷಕರನ್ನೂ ಥಳಿಸಿದ್ದರು. ಈ ವೇಳೆ ಮತ ಹಾಕುವಂತೆ ಒತ್ತಾಯಿಸಿದ್ದ ಅವರು, ಇಲ್ಲವೆಂದರೆ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಬೆದರಿಸಿದ್ದರು” ಎಂದು ಹೇಳಿದ್ದಾರೆ.

“ಅಷ್ಟೆ ಅಲ್ಲದೆ, ಅಕ್ಟೋಬರ್ 25 ರಿಂದ ನನ್ನ ಬೆಂಬಲಿಗರಿಗೆ ಕಿರುಕುಳ ನೀಡಲಾಗುತ್ತಿದೆ. ನನ್ನ ಪ್ರಚಾರ ಪೋಸ್ಟರ್‌ಗಳನ್ನು ಹರಿದು ಹಾಕಲಾಗಿದ್ದು, ಜನರು ನನಗೆ ಮತ ಹಾಕುವುದನ್ನು ತಡೆಯಲು ಈ ಪ್ರಯತ್ನಗಳನ್ನು ಮಾಡಲಾಗಿದೆ” ಎಂದು ಮೀನಾ ಹೇಳಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿರುವುದರಿಂದ, ಮತ್ತಷ್ಟು ಹಿಂಸಾಚಾರವನ್ನು ತಡೆಗಟ್ಟಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಕಳೆದ ರಾತ್ರಿಯ ಅವ್ಯವಸ್ಥೆಗೆ ಕಾರಣರಾದವರನ್ನು ಗುರುತಿಸಲು ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೀನಾ ಅವರನ್ನು ಬಂಧಿಸುವಂತೆ ರಾಜಸ್ಥಾನದ ಆಡಳಿತ ಸೇವಾ ಅಧಿಕಾರಿಗಳ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...