Homeಮುಖಪುಟಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

ಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

- Advertisement -
- Advertisement -

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಮಿತ್ ಚೌಧರಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಡಿಯೋಲಿ ಉನಿಯಾರಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಬಂಧಿಸಲು ಪೊಲೀಸರು ಯತ್ನಿಸಿದ ನಂತರ ಬುಧವಾರ ತಡರಾತ್ರಿ ರಾಜಸ್ಥಾನದ ಟೋಂಕ್‌ನ ಸಮ್ರಾವತ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ. ಚುನಾವಣಾ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿದ್ದ ಅಮಿತ್ ಚೌಧರಿ ಅವರಿಗೆ ಮತಗಟ್ಟೆಯ ಹೊರಗೆ ಮೀನಾ ಅವರು ಹಲ್ಲೆ ನಡೆಸಿದ್ದರು. ಈ ವಿಡಿಯೊ ವೈರಲ್ ಆಗಿದೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪೊಲೀಸರು ಮೀನಾ ಅವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಂತೆ, ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆಕೋರರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕನಿಷ್ಠ 60 ಜನರನ್ನು ಬಂಧಿಸಲಾಗಿದೆ ಎಂದು ಅಜ್ಮೀರ್ ರೇಂಜ್ ಐಜಿ ಓಂ ಪ್ರಕಾಶ್ ಖಚಿತಪಡಿಸಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂಸಾಚಾರದ ವೇಳೆ ಉದ್ರಿಕ್ತ ಜನರು ಸುಮಾರು 24 ದೊಡ್ಡ ವಾಹನಗಳು ಮತ್ತು 48 ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ, ಶೋಧ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತುಕಡಿಗಳನ್ನು ಗುರುವಾರ ಮುಂಜಾನೆ ನಿಯೋಜಿಸಲಾಯಿತು ಎಂದು ವರದಿ ಹೇಳಿದೆ.

ಘಟನೆಗಳ ಬಗ್ಗೆ ವಿವರಿಸಿದ ಟೋಂಕ್ ಎಸ್ಪಿ ವಿಕಾಸ್ ಸಾಂಗ್ವಾನ್, “ಸಮ್ರಾವತ ಗ್ರಾಮದಲ್ಲಿ ಕೆಲವರು ಮತದಾನವನ್ನು ಬಹಿಷ್ಕರಿಸಿದ್ದಾರೆ. ಸಮಸ್ಯೆ ಬಗೆಹರಿಸಲು ಎಸ್‌ಡಿಎಂ, ತಹಸೀಲ್ದಾರ್‌, ಹೆಚ್ಚುವರಿ ಎಸ್‌ಪಿ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಮತಗಟ್ಟೆಗೆ ನುಗ್ಗಿ ಎಸ್‌ಡಿಎಂ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಹೆಚ್ಚುವರಿ ಎಸ್ಪಿ ಅವರನ್ನು ತಡೆದಿದ್ದಾರೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಮ್ಮ ಮಧ್ಯಸ್ಥಿಕೆಯ ನಂತರ ಮತದಾನ ಶಾಂತಿಯುತವಾಗಿ ಪುನರಾರಂಭವಾಯಿತು” ಎಂದು ಹೇಳಿದ್ದಾ ರೆ.

ಘಟನೆ ಬಗ್ಗೆ ಮಾತನಾಡಿರುವ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಈ ಹಿಂದೆ ಎಸ್‌ಡಿಎಂ ಅಮಿತ್ ಚೌಧರಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. “ಈ ಹಿಂದೆ ಹಿಂದೋಳಿಯಲ್ಲಿ ಎಸ್‌ಡಿಎಂ ಅಮಿತ್ ಅವರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಮಹಿಳೆಯ ಪತಿ ಮತ್ತು ಶಿಕ್ಷಕರನ್ನೂ ಥಳಿಸಿದ್ದರು. ಈ ವೇಳೆ ಮತ ಹಾಕುವಂತೆ ಒತ್ತಾಯಿಸಿದ್ದ ಅವರು, ಇಲ್ಲವೆಂದರೆ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಬೆದರಿಸಿದ್ದರು” ಎಂದು ಹೇಳಿದ್ದಾರೆ.

“ಅಷ್ಟೆ ಅಲ್ಲದೆ, ಅಕ್ಟೋಬರ್ 25 ರಿಂದ ನನ್ನ ಬೆಂಬಲಿಗರಿಗೆ ಕಿರುಕುಳ ನೀಡಲಾಗುತ್ತಿದೆ. ನನ್ನ ಪ್ರಚಾರ ಪೋಸ್ಟರ್‌ಗಳನ್ನು ಹರಿದು ಹಾಕಲಾಗಿದ್ದು, ಜನರು ನನಗೆ ಮತ ಹಾಕುವುದನ್ನು ತಡೆಯಲು ಈ ಪ್ರಯತ್ನಗಳನ್ನು ಮಾಡಲಾಗಿದೆ” ಎಂದು ಮೀನಾ ಹೇಳಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿರುವುದರಿಂದ, ಮತ್ತಷ್ಟು ಹಿಂಸಾಚಾರವನ್ನು ತಡೆಗಟ್ಟಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಕಳೆದ ರಾತ್ರಿಯ ಅವ್ಯವಸ್ಥೆಗೆ ಕಾರಣರಾದವರನ್ನು ಗುರುತಿಸಲು ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೀನಾ ಅವರನ್ನು ಬಂಧಿಸುವಂತೆ ರಾಜಸ್ಥಾನದ ಆಡಳಿತ ಸೇವಾ ಅಧಿಕಾರಿಗಳ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...