Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...