Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...