Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...