Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...