Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...