Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...