Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...