Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....