Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...