Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...