Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...