Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...