Homeಕರ್ನಾಟಕಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

ಹೊನ್ನಾವರ ಖಾಸಗಿ ಬಂದರು ಸ್ಥಾಪನೆಗಾಗಿ ಮೀನುಗಾರರ ಮೇಲೆ ದಾಳಿ: ಮಾನವ ಹಕ್ಕು ಆಯೋಗಕ್ಕೆ ದೂರು

- Advertisement -
- Advertisement -

ಹೊನ್ನಾವರದಲ್ಲಿ ಖಾಸಗಿ ಬಂದರು ನಿರ್ಮಾಣಕ್ಕಾಗಿ ಅಸಹಾಯಕ ಮೀನುಗಾರರ ಒಕ್ಕಲೆಬ್ಬಿಸಲು ಕಳೆದ ನಡೆಸಿದ ದಾಳಿ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಕೊಡಲು ಮೀನುಗಾರರ ಸಂಘಟನೆಗಳು ಮುಂದಾಗಿವೆ. ಮಾಜಿ ಶಾಸಕ, ರಾಷ್ಟ್ರೀಯ ಮೀನುಗಾರ ಪರಿಷತ್ ಅಧ್ಯಕ್ಷ ಯು.ಆರ್ ಸಭಾಪತಿ ನೇತೃತ್ವದಲ್ಲಿ ರಾಷ್ಟ್ರಪತಿ ಮತ್ತು ಮಾನವ ಹಕ್ಕು ಆಯೋಗದ ಗಮನ ಸೆಳೆಯಲು ನಿರ್ಧರಿಸಲಾಗಿದೆ.

“ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅವರ ನೆಲೆ ಮೇಲೆ ಸುಮಾರು 500ರಷ್ಟು ಪೊಲೀಸರು ಹಾಗೂ ಬಂದರು ಕಂಪನಿಯ ಬಾಡಿಗೆ ಗೂಂಡಾಗಳು ಎರಗಿದ್ದಾರೆ. ಸರ್ಕಾರವೇ ಬಡ ಬೇಸ್ತರ ಒಕ್ಕಲೆಬ್ಬಿಸುವ ಅಮಾನವೀಯ ಕೃತ್ಯ ಮಾಡಿದೆ. ಕೋವಿಡ್‌ನಂಥ ಗಂಭೀರ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ವಾರಾಂತ್ಯಾದ ಬಿಗಿ ಲಾಕ್‌ಡೌನ್ ಇರುವ ಸಂದರ್ಭದಲ್ಲಿ ದೌರ್ಜನ್ಯ ನಡೆಸಲಾಗಿದೆ. ಆ ಹೊತ್ತಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ಇದ್ಯಾವುದೂ ಲೆಕ್ಕಿಸದೆ ನಸುಕು ಹರಿಯುತ್ತಿರುವಾಗಲೇ ಹಠಾತ್ ಜಿಲ್ಲಾ ಮತ್ತು ತಾಲ್ಲೂಕಾಡಳಿತ ಖಾಸಗಿ ಪುಂಡರೊಂದಿಗೆ ದಾಳಿ ಮಾಡಿದೆ” ಎಂದು ಮೀನುಗಾರರ ಸಂಘಟನೆಗಳು ಆರೋಪಿಸಿವೆ.

“ಮೀನುಗಾರ ಮಹಿಳೆಯನ್ನು ಎಳೆದಾಡಿ ಹಲ್ಲೆ ಮಾಡಲಾಗಿದೆ. ಹಲವು ಮೀನುಗಾರರ ವಸತಿ ಕಟ್ಟಡ ಧ್ವಂಸಗೊಳಿಸಲಾಗಿದೆ. ಕಸುಬಿಗೆ ಬಳಸುವ ಲಕ್ಷಾಂತರ ರೂ ಬೆಲೆಯ ಬಲೆ, ಮೀನುಗಾರಿಕೆಯ ವಿವಿಧ ಪರಿಕರ ನಾಶ ಮಾಡಿ ಬೆಸ್ತರ ಕುಟುಂಬಗಳನ್ನು ಬೀದಿ ಪಾಲು ಮಾಡಲಾಗಿದೆ. ಪೊಲೀಸ್ ಬಲಪ್ರಯೋಗದ ಮೂಲಕ ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಲಾಗಿದೆ. ಈ ಬರ್ಬರ ಕಾರ್ಯಚರಣೆಯಲ್ಲಿ ಖುದ್ದು ಸರ್ಕಾರದ ಆಡಳಿತವೇ ಮುಂಚೂಣಿಯಲ್ಲಿರುವುದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ನಡೆದಿದೆ” ಎಂದು ದೂರಲಾಗಿದೆ.

“ಜನರ ಹಿತಕಾಯಬೇಕಾದ ಸರ್ಕಾರದ ಅಧಿಕಾರಿಗಳ ಸಮ್ಮುಖದಲ್ಲೇ ನಡೆದಿರುವ ಈ ಘಟನೆ ನಮ್ಮ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುವಂತಿದೆ. ಮುಂದೆಯೂ ಸಹ ಖಾಸಗಿ ಬಂದರು ನಿರ್ಮಾಣ ಯೋಜನೆಯ ನೆಪದಲ್ಲಿ ಸರ್ಕಾರದ ಸ್ಥಳೀಯಾಡಳಿತ ಬಂಡವಾಳಗಾರರು ಮತ್ತು ಪ್ರಭಾವಿಗಳೊಂದಿಗೆ ಸೇರಿಕೊಂಡು ಕಾಸರಕೋಡಲ್ಲಿ ಮಾನವ ಹಕ್ಕುಗಳನ್ನು ದಮನ ಮಾಡುವ ಎಲ್ಲ ಸಾಧ್ಯತೆಯೂ ಇದೆ. ಈ ಬೆದರಿಕೆಯಲ್ಲಿ ಮೀನುಗಾರರು ತತ್ತರಿಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳು ಮತ್ತು ಮಾನವಹಕ್ಕು ಆಯೋಗ ಮಧ್ಯ ಪ್ರವೇಶ ಮಾಡಿ ಬಡ ಬೆಸ್ತರನ್ನು ಕಾಪಾಡಬೇಕಾಗಿದೆ” ಎಂದು ಮೀನುಗಾರರ ಸಂಘಟನೆಗಳು ಅಳಲು ತೋಡಿಕೊಂಡಿವೆ.

“ಬಂಡವಾಳ ತೊಡಗಿಸುವವರ ಆಕರ್ಷಿಸುವ ಮತ್ತು ಅಭಿವೃದ್ಧಿಯ ಹೆಸರಲ್ಲಿ ಸರ್ಕಾರ ಕರಾವಳಿಯ ಜನರ ಬದುಕನ್ನು ನಾಶ ಮಾಡಲು ಹೊರಟಂತಿದೆ. ಪರಿಸರ ಮತ್ತು ಜನರ ಆರೋಗ್ಯ ಹಾಳುಗೆಡುವಂಥ ಖಾಸಗಿಯವರ ಬೃಹತ್ ಯೋಜನೆಗಳಿಗಾಗಿ ಮೀನುಗಾರರ ಬದುಕವ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಕರಾವಳಿ ಪ್ರದೇಶದ ಬಹುತೇಕ ಕಡಲ ತೀರಗಳು ಈಗಾಗಲೇ ಸರ್ಕಾರದ ಅನೇಕ ಯೋಜನೆಗಳಿಗಾಗಿ ಪದಭಾರೆಯಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಇಷ್ಟಾದರೂ ಸರ್ಕಾರಕ್ಕೆ ತೃಪ್ತಿಯಾದಂತಿಲ್ಲ. ಕಾರವಾರ ಮತ್ತು ಮಂಗಳೂರಲ್ಲಿ ಎರಡು ಬೃಹತ್ ಬಂದರುಗಳಿವೆ; ಜಿಲ್ಲೆಯ ಬೇಲೇಕೇರಿಯಿಂದ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿದೆ. ಹೀಗಿರುವಾಗ ಮತ್ತೊಂದು ಖಾಸಗಿ ಬಂದರು ನಿರ್ಮಾಣದ ಹಠವೇಕೇ? ಉದ್ದೇಶಿತ ಬೃಹತ್ ಬಂದರು ಯೋಜನೆಯಿಂದ ಪರಿಸರ, ಜೀವ ವೈವಿಧ್ಯ, ಜನರ ಆರೋಗ್ಯ, ಪರಿಸರ ಸಾಂಪ್ರದಾಯಿಕ ಮೀನುಗಾರಿಕೆ ಮತ್ತು ವೃತ್ತಿ ಭದ್ರತೆ ಮೇಲಾಗುವ ಪರಿಣಾಮಗಳ ಕುರಿತು ಪ್ರಶ್ನಾವಳಿ ಬಂದರು ಇಲಾಖೆ ಹಾಗೂ ಸರ್ಕಾರಕ್ಕೆ ಕಳಿಸಿದರೂ ಕನಿಷ್ಠ ಸ್ಪಂದನೆಯೂ ಇಲ್ಲದಾಗಿದೆ ಬದಲಿಗೆ ಬದುಕು ಕಳಕೊಳ್ಳುವ ಬಡ ಬೆಸ್ತರ ಮೇಲೆಯೇ ಗೂಬೆ ಕೂರಿಸುವ ಷಡ್ಯಂತ್ರ ನಡೆದಿದೆ” ಎಂದು ಮೀನುಗಾರರ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...