Homeಅಂತರಾಷ್ಟ್ರೀಯಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

- Advertisement -
- Advertisement -

ಗಾಜಾ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಮತ್ತೆ ಆರಂಭಿಸಿದ್ದಕ್ಕೆ ಪ್ಯಾಲೆಸ್ತೀನ್ ಹೋರಾಟಗಾರ ಸೇನೆ ಹಮಾಸ್‌ ಗುರುವಾರ ಮೊದಲ ತಿರುಗೇಟು ನೀಡಿದ್ದು, ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಕಡೆಗೆ ರಾಕೆಟ್ ದಾಳಿ ನಡೆಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಗಾಜಾ ಮೇಲಿನ ದಾಳಿಗೆ

ಪ್ಯಾಲೆಸ್ತೀನ್ ಹೋರಾಟಗಾರ ಹಮಾಸ್‌ನ ಸಶಸ್ತ್ರ ವಿಭಾಗವಾದ ಎಜ್ಜೆಡೈನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ನಡೆಸಿದ “ಹತ್ಯಾಕಾಂಡ” ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಗಾಜಾದಿಂದ ಹಾರಿಸಲಾದ ಒಂದು ರಾಕೆಟ್‌ ಅನ್ನು ತಡೆಹಿಡಿಯಲಾಗಿದ್ದು, ಇತರ ಎರಡು ರಾಕೆಟ್‌ಗಳು ಜನವಸತಿಯಿಲ್ಲದ ಪ್ರದೇಶಕ್ಕೆ ಬಿದ್ದಿದೆ ಎಂದು ಇಸ್ರೇಲ್ ಹೇಳಿದೆ. ಗಾಜಾ ಮೇಲಿನ ದಾಳಿಗೆ

ಮಂಗಳವಾರ ಗಾಜಾ ಮೇಲಿನ ತನ್ನ ದಾಳಿಯನ್ನು ಇಸ್ರೇಲ್ ಮತ್ತೆ ಆರಂಭಿಸಿದೆ. ಈ ದಾಳಿಯಲ್ಲಿ ಕನಿಷ್ಠ 330 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಈ ದಾಳಿಗಳು ಪ್ರಾರಂಭವಾಗಿದ್ದು, ಜನವರಿ 19 ರಂದು ಕದನ ವಿರಾಮ ಜಾರಿಗೆ ಬಂದ ನಂತರ ಪ್ಯಾಲೆಸ್ತೀನಿ ಪ್ರದೇಶದ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ದಾಳಿಗಳಿಗೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ತಮ್ಮ ನಡುವಿನ ಕದನ ವಿರಾಮವನ್ನು ಏಕಪಕ್ಷೀಯವಾಗಿ ಕೊನೆಗೊಳಿಸಿದೆ ಎಂದು ಹೇಳಿದೆ. ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳಲ್ಲಿ 190 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 504 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಗುರುವಾರ ತಿಳಿಸಿದೆ.

ಹಗಲಿ ವೇಳೆ ಇಸ್ರೇಲ್ ಸೇನೆಯು ಮಧ್ಯ ಮತ್ತು ದಕ್ಷಿಣ ಗಾಜಾದಲ್ಲಿ ತನ್ನ ಭೂ ಕಾರ್ಯಾಚರಣೆಯನ್ನು ವಿಸ್ತರಿಸಿದೆ ಎಂದು ಹೇಳಿದೆ. “ಕಳೆದ 24 ಗಂಟೆಗಳಲ್ಲಿ, ಉತ್ತರ ಮತ್ತು ದಕ್ಷಿಣ ಭಾಗಗಳ ನಡುವಿನ ಭದ್ರತಾ ವಲಯವನ್ನು ವಿಸ್ತರಿಸುವ ಸಲುವಾಗಿ, ಇಸ್ರೇಲ್ ರಕ್ಷಣಾ ಪಡೆಗಳ ಸೈನಿಕರು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯಲ್ಲಿ ಗುರಿಯಿಟ್ಟುಕೊಂಡು ಭೂ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ” ಎಂದು ಸೇನಾ ವಕ್ತಾರ ಅವಿಚೇ ಅಡ್ರೇಯಿ ಹೇಳಿದ್ದಾರೆ.

ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪುನರಾರಂಭಿಸಿದಾಗಿನಿಂದ, ಗಾಜಾದ ನಾಗರಿಕರ ಮೇಲೆ ಅತ್ಯಂತ ಅಮಾನವೀಯ ಅಗ್ನಿಪರೀಕ್ಷೆಗಳನ್ನು ಅಂತ್ಯವಿಲ್ಲದೆ ನಡೆಸಲಾಗುತ್ತಿದೆ ಎಂದು ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

“ಮೂರನೇ ದಿನವೂ ಇಸ್ರೇಲ್ ಪಡೆಗಳು ವಾಯು ಮತ್ತು ಸಮುದ್ರದಿಂದ ಬಾಂಬ್ ದಾಳಿ ಮುಂದುವರೆಸಿದೆ. ನಮ್ಮ ದೈನಂದಿನ ಕಣ್ಗಾವಲಿನಲ್ಲಿ, ಗಾಜಾದಲ್ಲಿ ಜನರು ಮತ್ತೆ ಮತ್ತೆ ತಮ್ಮ ಕೆಟ್ಟ ದುಃಸ್ವಪ್ನವನ್ನು ಎದುರಿಸುತ್ತಿದ್ದಾರೆ.” ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

ಗಾಜಾ ಮೇಲಿನ ದಾಳಿಯನ್ನು ಮಂಗಳವಾರ ಸಮರ್ಥಿಸಿಕೊಂಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪದೇ ಪದೇ ನಿರಾಕರಿಸುವುದು ಮತ್ತು ಕದನ ವಿರಾಮವನ್ನು ವಿಸ್ತರಿಸುವ ಮಾತುಕತೆಗಳಲ್ಲಿ ಪ್ರಗತಿಯ ಕೊರತೆಯ ಕಾರಣಕ್ಕೆ ವಾಯುದಾಳಿಗಳಿಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

“ಇನ್ನು ಮುಂದೆ, ಇಸ್ರೇಲ್ ಹಮಾಸ್ ವಿರುದ್ಧ ಹೆಚ್ಚಿನ ಮಿಲಿಟರಿ ಬಲದೊಂದಿಗೆ ಕ್ರಮ ಕೈಗೊಳ್ಳುತ್ತದೆ. ಕಾರ್ಯಾಚರಣಾ ಯೋಜನೆಯನ್ನು ಸೇನೆ ವಾರಾಂತ್ಯದಲ್ಲಿ ಮಂಡಿಸಿದ್ದು, ಅದಕ್ಕೆ ರಾಜಕೀಯ ನಾಯಕತ್ವವು ಅನುಮೋದಿಸಿತು.” ಎಂದು ನೆತನ್ಯಾಹು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...