Homeಅಂತರಾಷ್ಟ್ರೀಯಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

- Advertisement -
- Advertisement -

ಗಾಜಾ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಮತ್ತೆ ಆರಂಭಿಸಿದ್ದಕ್ಕೆ ಪ್ಯಾಲೆಸ್ತೀನ್ ಹೋರಾಟಗಾರ ಸೇನೆ ಹಮಾಸ್‌ ಗುರುವಾರ ಮೊದಲ ತಿರುಗೇಟು ನೀಡಿದ್ದು, ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಕಡೆಗೆ ರಾಕೆಟ್ ದಾಳಿ ನಡೆಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಗಾಜಾ ಮೇಲಿನ ದಾಳಿಗೆ

ಪ್ಯಾಲೆಸ್ತೀನ್ ಹೋರಾಟಗಾರ ಹಮಾಸ್‌ನ ಸಶಸ್ತ್ರ ವಿಭಾಗವಾದ ಎಜ್ಜೆಡೈನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ನಡೆಸಿದ “ಹತ್ಯಾಕಾಂಡ” ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಗಾಜಾದಿಂದ ಹಾರಿಸಲಾದ ಒಂದು ರಾಕೆಟ್‌ ಅನ್ನು ತಡೆಹಿಡಿಯಲಾಗಿದ್ದು, ಇತರ ಎರಡು ರಾಕೆಟ್‌ಗಳು ಜನವಸತಿಯಿಲ್ಲದ ಪ್ರದೇಶಕ್ಕೆ ಬಿದ್ದಿದೆ ಎಂದು ಇಸ್ರೇಲ್ ಹೇಳಿದೆ. ಗಾಜಾ ಮೇಲಿನ ದಾಳಿಗೆ

ಮಂಗಳವಾರ ಗಾಜಾ ಮೇಲಿನ ತನ್ನ ದಾಳಿಯನ್ನು ಇಸ್ರೇಲ್ ಮತ್ತೆ ಆರಂಭಿಸಿದೆ. ಈ ದಾಳಿಯಲ್ಲಿ ಕನಿಷ್ಠ 330 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಈ ದಾಳಿಗಳು ಪ್ರಾರಂಭವಾಗಿದ್ದು, ಜನವರಿ 19 ರಂದು ಕದನ ವಿರಾಮ ಜಾರಿಗೆ ಬಂದ ನಂತರ ಪ್ಯಾಲೆಸ್ತೀನಿ ಪ್ರದೇಶದ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ದಾಳಿಗಳಿಗೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ತಮ್ಮ ನಡುವಿನ ಕದನ ವಿರಾಮವನ್ನು ಏಕಪಕ್ಷೀಯವಾಗಿ ಕೊನೆಗೊಳಿಸಿದೆ ಎಂದು ಹೇಳಿದೆ. ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳಲ್ಲಿ 190 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 504 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಗುರುವಾರ ತಿಳಿಸಿದೆ.

ಹಗಲಿ ವೇಳೆ ಇಸ್ರೇಲ್ ಸೇನೆಯು ಮಧ್ಯ ಮತ್ತು ದಕ್ಷಿಣ ಗಾಜಾದಲ್ಲಿ ತನ್ನ ಭೂ ಕಾರ್ಯಾಚರಣೆಯನ್ನು ವಿಸ್ತರಿಸಿದೆ ಎಂದು ಹೇಳಿದೆ. “ಕಳೆದ 24 ಗಂಟೆಗಳಲ್ಲಿ, ಉತ್ತರ ಮತ್ತು ದಕ್ಷಿಣ ಭಾಗಗಳ ನಡುವಿನ ಭದ್ರತಾ ವಲಯವನ್ನು ವಿಸ್ತರಿಸುವ ಸಲುವಾಗಿ, ಇಸ್ರೇಲ್ ರಕ್ಷಣಾ ಪಡೆಗಳ ಸೈನಿಕರು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯಲ್ಲಿ ಗುರಿಯಿಟ್ಟುಕೊಂಡು ಭೂ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ” ಎಂದು ಸೇನಾ ವಕ್ತಾರ ಅವಿಚೇ ಅಡ್ರೇಯಿ ಹೇಳಿದ್ದಾರೆ.

ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪುನರಾರಂಭಿಸಿದಾಗಿನಿಂದ, ಗಾಜಾದ ನಾಗರಿಕರ ಮೇಲೆ ಅತ್ಯಂತ ಅಮಾನವೀಯ ಅಗ್ನಿಪರೀಕ್ಷೆಗಳನ್ನು ಅಂತ್ಯವಿಲ್ಲದೆ ನಡೆಸಲಾಗುತ್ತಿದೆ ಎಂದು ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

“ಮೂರನೇ ದಿನವೂ ಇಸ್ರೇಲ್ ಪಡೆಗಳು ವಾಯು ಮತ್ತು ಸಮುದ್ರದಿಂದ ಬಾಂಬ್ ದಾಳಿ ಮುಂದುವರೆಸಿದೆ. ನಮ್ಮ ದೈನಂದಿನ ಕಣ್ಗಾವಲಿನಲ್ಲಿ, ಗಾಜಾದಲ್ಲಿ ಜನರು ಮತ್ತೆ ಮತ್ತೆ ತಮ್ಮ ಕೆಟ್ಟ ದುಃಸ್ವಪ್ನವನ್ನು ಎದುರಿಸುತ್ತಿದ್ದಾರೆ.” ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

ಗಾಜಾ ಮೇಲಿನ ದಾಳಿಯನ್ನು ಮಂಗಳವಾರ ಸಮರ್ಥಿಸಿಕೊಂಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪದೇ ಪದೇ ನಿರಾಕರಿಸುವುದು ಮತ್ತು ಕದನ ವಿರಾಮವನ್ನು ವಿಸ್ತರಿಸುವ ಮಾತುಕತೆಗಳಲ್ಲಿ ಪ್ರಗತಿಯ ಕೊರತೆಯ ಕಾರಣಕ್ಕೆ ವಾಯುದಾಳಿಗಳಿಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

“ಇನ್ನು ಮುಂದೆ, ಇಸ್ರೇಲ್ ಹಮಾಸ್ ವಿರುದ್ಧ ಹೆಚ್ಚಿನ ಮಿಲಿಟರಿ ಬಲದೊಂದಿಗೆ ಕ್ರಮ ಕೈಗೊಳ್ಳುತ್ತದೆ. ಕಾರ್ಯಾಚರಣಾ ಯೋಜನೆಯನ್ನು ಸೇನೆ ವಾರಾಂತ್ಯದಲ್ಲಿ ಮಂಡಿಸಿದ್ದು, ಅದಕ್ಕೆ ರಾಜಕೀಯ ನಾಯಕತ್ವವು ಅನುಮೋದಿಸಿತು.” ಎಂದು ನೆತನ್ಯಾಹು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...