Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...