Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...