Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...