Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...