Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...