Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...