Homeಅಂತರಾಷ್ಟ್ರೀಯಇರಾನ್ ಮೇಲೆ ದಾಳಿ | ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಲು ಟ್ರಂಪ್‌ಗೆ ಅಧಿಕಾರವಿಲ್ಲ ಎಂದ ಅಮೆರಿಕ ಸಂಸದ

ಇರಾನ್ ಮೇಲೆ ದಾಳಿ | ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಲು ಟ್ರಂಪ್‌ಗೆ ಅಧಿಕಾರವಿಲ್ಲ ಎಂದ ಅಮೆರಿಕ ಸಂಸದ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕ ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಇದನ್ನು ಅಮೆರಿಕದ ಸೆನೆಟರ್‌ ಬರ್ನಿ ಸ್ಯಾಂಡರ್ಸ್ ವಿರೋಧಿಸಿದ್ದು, ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಬಲ್ಲ ಏಕೈಕ ಸಂಸ್ಥೆ ಅಮೆರಿಕದ ಸಂಸತ್ತು ಮಾತ್ರ ಎಂದು ಹೇಳಿದ್ದಾರೆ. ಇರಾನ್ ಮೇಲೆ ದಾಳಿ

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವರ್ಮೊಂಟ್‌ನ ಸೆನೆಟರ್ ಬರ್ನಿ ಸ್ಯಾಂಡರ್ಸ್, “‘ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲಿನ ನಮ್ಮ ದಾಳಿಯನ್ನು ನಾವು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ.’ ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಈ ಬಗ್ಗೆ ನನಗೆ ಇದೀಗ ಸುದ್ದಿ ಬಂದಿದೆ. ಆದರೆ ಅದು ತುಂಬಾ ಅಸಾಂವಿಧಾನಿಕ ನಡೆಯಾಗಿದೆ. ಈ ದೇಶವನ್ನು ಯುದ್ಧಕ್ಕೆ ಕೊಂಡೊಯ್ಯಬಲ್ಲ ಏಕೈಕ ಸಂಸ್ಥೆ ಅಮೆರಿಕದ ಸಂಸತ್ತು ಎಂದು ಎಲ್ಲರಿಗೂ ತಿಳಿದಿದೆ, ಅಧ್ಯಕ್ಷರಿಗೆ ಈ ಹಕ್ಕಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನಿಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಇರಾನ್ ಮೇಲೆ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...