Homeಮುಖಪುಟನ್ಯಾಯಾಂಗದ ಶಿಥಿಲೀಕರಣ: ಪ್ರಜಾಪ್ರಭುತ್ವದ ಹತ್ಯೆಯೆ ಸಂಚು

ನ್ಯಾಯಾಂಗದ ಶಿಥಿಲೀಕರಣ: ಪ್ರಜಾಪ್ರಭುತ್ವದ ಹತ್ಯೆಯೆ ಸಂಚು

- Advertisement -
- Advertisement -

ಒಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಇಲ್ಲ ಹಾಳುಗೆಡವಲು ಕೇವಲ ಚುನಾವಣಾ ರಾಜಕೀಯದಿಂದ ಮಾತ್ರ ಸಾಧ್ಯ ಎಂಬುದು ಸುಳ್ಳು. ವ್ಯವಸ್ಥೆಯ ಒಳಗೇ ಇದ್ದು ಗೆದ್ದಲಿನಂತೆ ತಿಂದು ಅದನ್ನು ಕೆಲಸಕ್ಕೆ ಬಾರದಂತೆ ಮಾಡುವುದೂ ಒಂದು ಉಪಾಯ. ಆಗಬೇಕಾದದ್ದಿಷ್ಟೇ; ಪ್ರತಿಯೊಂದು ಕ್ಷೇತ್ರದಲ್ಲೂ ಗೆದ್ದಲುಗಳನ್ನು ತಂದು ಹಾಕುವುದು; ಅವಕ್ಕೆ ಪ್ರಶಸ್ತವಾದ ಪರಿಸ್ಥಿತಿಯನ್ನು ಸೃಷ್ಟಿಸಿಕೊಡುವುದು; ಮುಂದಿನ ಕೆಲಸವನ್ನು ಅವೇ ಮಾಡುತ್ತವೆ. ಇವತ್ತು ದೇಶದ ಪ್ರಜಾಪ್ರಭುತ್ವ ಒಳಗಿಂದೊಳಗೇ ಹೀಗೆಯೇ ಪೊಳ್ಳಾಗುತ್ತಿದೆ; ಸಂವಿಧಾನದ ವಿವಿಧ ಪೀಠಗಳಲ್ಲಿ ಕುಳಿತಿರುವ ವ್ಯಕ್ತಿಗಳು ಹೇಗೆ ಅದರ ರೆಂಬೆಕೊಂಬೆಗಳನ್ನು ಕಡಿದುಹಾಕುವ ಹುನ್ನಾರದಲ್ಲಿದ್ದಾರೆ ಎಂಬುದು ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ವ್ಯಕ್ತಿಗೂ ಕಾಣಿಸುತ್ತಿದೆ.

ಕಳೆದ ಕೆಲವು ತಿಂಗಳುಗಳಿಂದ ಒಂದಾದ ಮೇಲೆ ಒಂದಂತೆ ದೇಶದ ಸರ್ವೋಚ್ಚ ನ್ಯಾಯಾಲಯದ ಮೇಲೆ ವಾಗ್ದಾಳಿಗಳು ನಡೆಯುತ್ತಲೇ ಇವೆ. ಆದರೆ ಅದ್ಯಾಕೋ ಬೆರಳೆಣಿಕೆಯ ಕೆಲವರನ್ನು ಬಿಟ್ಟು, ಇದರ ಬಗ್ಗೆ ತಲೆ ಕೆಡಿಸಿಕೊಂಡಿದ್ದಾಗಲೀ, ಚರ್ಚಿಸಿದ್ದಾಗಲಿ ಅಥವಾ ಆತಂಕ ವ್ಯಕ್ತಪಡಿಸಿದ್ದಾಗಲಿ ದೊಡ್ಡ ಮಟ್ಟದಲ್ಲಿ ಕಾಣಲಿಲ್ಲ. ಧರ್ಮದ ವಿಷಯಗಳಲ್ಲಿ ಅಥವಾ ಲವ್‌ಜಿಹಾದ್‌ದಂತಹ ಸಂಗತಿಗಳಲ್ಲಿ ಹೆಚ್ಚಿನ ಜನ ತೋರುವ ಆಸಕ್ತಿ, ಉತ್ಸಾಹ ಅಥವಾ ಚರ್ಚೆಯಲ್ಲಿ ಭಾಗವಹಿಸುವಿಕೆ, ದೇಶದ ಪ್ರಜಾಪ್ರಭುತ್ವದ ಉಳಿವಿನ ಪ್ರಶ್ನೆಗಳನ್ನು ಎದುರಾದಾಗ ಕುಂಠಿತವಾಗಿರುವ ಅನುಮಾನ ಕಾಡುತ್ತದೆ.

ಸುಪ್ರೀಂಕೋರ್ಟಿನ ಕೊಲಿಜಿಯಂ ವ್ಯವಸ್ಥೆಯಲ್ಲಿ ನ್ಯಾಯಾಧೀಶರೇ ನ್ಯಾಯಾಧೀಶರನ್ನು ನೇಮಿಸುವ ಪದ್ಧತಿಯ ಬಗ್ಗೆ ಅನೇಕ ದಶಕಗಳಿಂದ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಅತೃಪ್ತಿ ಇದ್ದೇ ಇದೆ. ಒಂದಲ್ಲಒಂದು ಕಾರಣಕ್ಕೆ ವಿವಿಧ ಸರ್ಕಾರಗಳು ಈ ಪ್ರಶ್ನೆಯನ್ನು ಎತ್ತುತ್ತಲೇ ಬಂದಿವೆ. ಅದಕ್ಕೆ ಪೂರಕವಾಗಿ ಸುಪ್ರೀಂಕೋರ್ಟ್ ಕೂಡ ತನ್ನ 3 ಪ್ರಮುಖ ತೀರ್ಮಾನಗಳಾದ 1982ರ ಎಸ್.ಪಿ ಗುಪ್ತಾ ಕೇಸ್, 1993ರ ಸುಪ್ರೀಂಕೋರ್ಟ್ ಅಡ್ವೋಕೇಟ್ ಆನ್ ರೆಕಾರ್ಡ್ ಅಸೋಸಿಯೇಶನ್ ಕೇಸ್ ಹಾಗೂ 1998ರಲ್ಲಿ ಅಂದಿನ ರಾಷ್ಟ್ರಪತಿಗಳು ಈ ವಿಷಯದ ಕುರಿತು ಕೇಳಿದ ವಿವರಣೆ ಹಾಗೂ ಅದಕ್ಕೆ ಪ್ರತಿಕ್ರಿಯಿಸುವ ಮೂಲಕ ನ್ಯಾಯಾಂಗ ತನ್ನ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ಬಂದಿದೆ.

ಕಿರಣ್ ರಿಜೆಜು

ಕೊಲಿಜಿಯಂ ವ್ಯವಸ್ಥೆಯಲ್ಲಿ ಅನೇಕ ಲೋಪದೋಷಗಳು ಇರುವುದು ನಿಜ. ಆದರೆ ಅದಕ್ಕಿಂತ ಉತ್ತಮವಾದ, ದೋಷಮುಕ್ತವಾದ, ಜಾರಿಗೊಳಿಸಲು ಸುಲಭ ಸಾಧ್ಯವಾದ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಪಾರದರ್ಶಕವಾಗಿ, ಸ್ವತಂತ್ರವಾಗಿ ಹಾಗೂ ನಿರ್ಭಿತಿಯಿಂದ ಕೆಲಸ ಮಾಡುವ ಪರ್ಯಾಯ ವ್ಯವಸ್ಥೆಯ ರಚನೆ ಆಗಿದೆಯೇ? ಅಂತಹ ಪರ್ಯಾಯಗಳು ಇನ್ನೂ ಕಲ್ಪಿಸಿಕೊಂಡಿಲ್ಲವಾದರೆ, ಇರುವುದರಲ್ಲೇ ಸ್ವಲ್ಪ ನೆಟ್ಟಗೆ ಕೆಲಸ ಮಾಡುತ್ತಿರುವ ಮತ್ತು ಭರವಸೆ ಉಳಿಸಿಕೊಂಡಿರುವ ನ್ಯಾಯಾಂಗದ ಮೇಲೆ ಈ ಮಟ್ಟಿಗೆ ನಡೆಯುತ್ತಿರುವ ದಾಳಿಗಳ ಹಿಂದಿನ ಉದ್ದೇಶವೇನು?

ಉತ್ತರ ಬಹಳ ಸರಳವಾಗಿದೆ: ನ್ಯಾಯಾಂಗ ವ್ಯವಸ್ಥೆಗೆ ಗೆದ್ದಲು ಹಿಡಿಸುವುದೇ ಈ ದಾಳಿಯ ಮುಖ್ಯ ಉದ್ದೇಶ. ಎಲ್ಲ ಕ್ಷೇತ್ರಗಳಲ್ಲಿ ಇರುವಂತೆಯೇ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟ, ಪೂರ್ವಾಗ್ರಹಪೀಡಿತ, ಅಸಮರ್ಥ ನ್ಯಾಯಾಧೀಶರು ಇರುವುದು ಸಹಜ. ಆದರೆ ಇಂದಿಗೂ ದೇಶದ ನಾಗರಿಕರು ಎಂಥದೇ ಸಮಸ್ಯೆ ಬಂದಾಗ, ಹತಾಶರಾದಾಗ ನ್ಯಾಯಾಂಗದತ್ತ ಆಶಾಭಾವನೆಯಿಂದ ನೋಡುವುದು ನಿಜ. ಆದರೆ ಅದರ ಪತನದ ಪ್ರಯತ್ನಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡದಂತೆ ನೋಡಿಕೊಳ್ಳುತ್ತಿರುವುದು ದುರಂತ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

ಕೇಂದ್ರ ಕಾನೂನು ಮಂತ್ರಿ ಕಿರಣ್ ರಿಜೆಜು ಇತ್ತೀಚೆಗೆ ಅವಕಾಶ ಸಿಕ್ಕಾಗಲೆಲ್ಲಾ ಸುಪ್ರೀಂಕೋರ್ಟಿನ ಕಾರ್ಯವೈಖರಿಯನ್ನು ಪ್ರಶ್ನಿಸುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ, ಭಾಷಣಗಳಲ್ಲಿ ಎಲ್ಲ ಕಡೆಗಳಲ್ಲೂ ನ್ಯಾಯಾಂಗವನ್ನು ಟೀಕಿಸುತ್ತಿದ್ದಾರೆ ಮತ್ತು ಆ ಮಾತುಗಳೆಲ್ಲವನ್ನೂ ವಿವಿಧ ಮಾಧ್ಯಮಗಳು ದೇಶದ ಮೂಲೆಮೂಲೆಗೆ ಪ್ರಚಾರ ಮಾಡುತ್ತಿವೆ. ಆದರೆ ಅದಕ್ಕೆ ಪ್ರತಿಯಾಗಿ ಮಾತಾಡುವವರ ಯಾವ ಮಾತುಗಳೂ ಜನರಿಗೆ ಮುಟ್ಟುತ್ತಿಲ್ಲ. ಸುಪ್ರೀಂಕೋರ್ಟ್ ದೇಶದ ವಿವಿಧ ಹೈಕೋರ್ಟ್‌ಗಳಿಗೆಂದು ಆಯ್ಕೆ ಮಾಡಿದ ನ್ಯಾಯಾಧೀಶರ ಪಟ್ಟಿ ಕೇಂದ್ರ ಸರ್ಕಾರದ ಎದುರು ಪರಿಶೀಲನೆಗಾಗಿ ಕಳುಹಿಸಿ ಒಂದೂವರೆ ವರ್ಷಕ್ಕೂ ಅಧಿಕ ಅವಧಿಯಾಗಿದೆ. ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳು ಹಾಗೂ ಬಾಕಿ ಇರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌ನ ಮೊರೆ ಕೇಂದ್ರಕ್ಕೆ ಕೇಳಿಸುವುದಿಲ್ಲ ಏಕೆ? ಅದು ಗೊತ್ತಾಗಲು ನ್ಯಾಯಾಂಗ ನೀಡಿದ ಪಟ್ಟಿಯಲ್ಲಿರುವ ಸಂಭಾವ್ಯ ನ್ಯಾಯಾಧೀಶರ ಹೆಸರುಗಳು ಮತ್ತು ಅವರ ಹಿನ್ನಲೆಯನ್ನು ತಿಳಿಯುವುದು ಮುಖ್ಯವಾಗಬಹುದು.

ಒಂದು ಸಣ್ಣ ಲೇಖನದಲ್ಲಿ ಆ ಎಲ್ಲ ವಿವರಗಳನ್ನು ನೀಡಲು ಸಾಧ್ಯವಾಗುವುದಿಲ್ಲವಾದರೂ, ಸಂಕ್ಷಿಪ್ತವಾಗಿ “ದ ವೈರ್”ನ ವಿಶ್ಲೇಷಣಾತ್ಮಕ ವರದಿ ಹೇಳುವುದಿಷ್ಟು: ’ಒಬ್ಬ ಪ್ರತಿಭಾವಂತ ಸಲಿಂಗಿ, ಒಬ್ಬ ಮುಸ್ಲಿಂ, ಇನ್ನು ಹಲವರು ಕಾಲಕಾಲಕ್ಕೆ ಕೇಂದ್ರಸರ್ಕಾರದ ಧೋರಣೆಗಳನ್ನು ಪ್ರಶ್ನಿಸಿದವರು’. ಹಾಗಾದರೆ ಎಂತಹ ಜನರನ್ನು ನ್ಯಾಯಾಧೀಶರನ್ನಾಗಿ ಆಯ್ಕೆ ಮಾಡಲು ಕೇಂದ್ರ ಬಯಸುತ್ತದೆ ಎಂಬುದು ನಿಚ್ಚಳವಾಗಿದೆ.

ಮಂತ್ರಿಗಳು ಸರ್ಕಾರದ ಪರವಾಗಿ ಮಾತಾಡುವುದು ಸಹಜ. ಇನ್ನು ಸಂವಿಧಾನಬದ್ಧ ಹುದ್ದೆಗಳಿಗೆ ಏರಿರುವ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳು ತಮ್ಮನ್ನು ನಿಯೋಜಿಸಿದ ಸರ್ಕಾರಗಳ ಸಮರ್ಥನೆ ಮಾಡುವುದೂ ಸಹಜ ಆದರೆ ತಮ್ಮ ಸ್ಥಾನಗಳ ಘನತೆಯನ್ನು ಪಕ್ಕಕ್ಕಿಟ್ಟು ಸರ್ಕಾರದ ಏಜೆಂಟರುಗಳಂತೆ ವರ್ತಿಸುವುದು ಸಂವಿಧಾನಕ್ಕೆ ಮಾಡುವ ದ್ರೋಹ ಎನ್ನಬಹುದು.

ಜಗದೀಶ್ ಧನಕರ್

ದೇಶದ ಉಪರಾಷ್ಟ್ರಪತಿಗಳಾದ ಜಗದೀಶ್ ಧನಕರ್ ಅವರು ಸುಪ್ರೀಂಕೋರ್ಟ್‌ಅನ್ನು ಟೀಕೆ ಮಾಡುತ್ತ ’1973ರಲ್ಲಿ ಕೇಶವಾನಂದ ಭಾರತಿ ಕೇಸಿನಲ್ಲಿ ಸಂವಿಧಾನದ ಮೂಲ ಚೌಕಟ್ಟಿಗೆ ಧಕ್ಕೆ ಆಗಬಾರದು ಎಂದು ಹೇಳುವ ಮೂಲಕ ಒಂದು ಕೆಟ್ಟ ತೀರ್ಮಾನವನ್ನು ನೀಡಿದೆ’ ಎಂದಿದ್ದಾರೆ. ಈ ಮಾತು ಸಂವಿಧಾನದ ಮೂಲ ಚೌಕಟ್ಟಿನ ಕಲ್ಪನೆ ಇರದ ಯಾರಿಗೂ ತಪ್ಪಾಗಿ ಕಾಣುವುದಿಲ್ಲ. ಆದರೆ 13 ಜನರ ಸಂವಿಧಾನ ಪೀಠ ನೀಡಿದ, ದೇಶದ ಅತ್ಯಂತ ಉದಾತ್ತ ಧ್ಯೇಯಗಳನ್ನು ಎತ್ತಿಹಿಡಿದ ತೀರ್ಮಾನವನ್ನು ಸಾರಾಸಗಟಾಗಿ ತಳ್ಳಿಹಾಕುವುದರ ಹಿಂದೆ ಸಂವಿಧಾನದ ಬೆನ್ನುಮೂಳೆ ಮುರಿಯುವ ಪ್ರಯತ್ನ ಸ್ಪಷ್ಟವಾಗಿ ಕಾಣುತ್ತದೆ.

ಕೇಶವಾನಂದ ಭಾರತಿ ಪ್ರಕರಣದ ತೀರ್ಪಿನಲ್ಲಿ ಅವರ ಪರವಾಗಿ ವಾದ ಮಾಡಿದ ದೇಶದ ಮೇಧಾವಿ ವಕೀಲರಾದ ನಾನಿ ಫಾಲ್ಕಿವಾಲಾ ’ಸಂವಿಧಾನದ ಮುನ್ನುಡಿಯಲ್ಲಿ ಸಂವಿಧಾನದ ನಿರ್ಮಾತೃಗಳು ವ್ಯಕ್ತಪಡಿಸಿದ ಆಶಯಗಳಾದ ಸಮಾಜವಾದಿ, ಜಾತ್ಯತೀತ, ಒಕ್ಕೂಟ, ಗಣರಾಜ್ಯ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ನ್ಯಾಯಾಂಗ ಪರಿಶೀಲನೆ, ಸಂವಿಧಾನದ ಶ್ರೇಷ್ಠತೆ ಮತ್ತು ಅಧಿಕಾರದ ವಿಂಗಡನೆಯ ಜೊತೆಗೆ ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಘನತೆ’ ಇವು ಸಂವಿಧಾನದ ಮೂಲ ಚೌಕಟ್ಟಿನ ಆಧಾರಗಳಾಗಿವೆ ಎಂದು ಅದ್ಭುತವಾಗಿ ವಾದ ಮಂಡಿಸಿದ್ದರು. ಸಂವಿಧಾನದ ಯಾವ ಭಾಗ ಅಥವಾ ಅನುಚ್ಛೇದವನ್ನು ಬೇಕಾದರೂ ಕಾರ್ಯಾಂಗ ತಿದ್ದುಪಡಿ ಅಥವಾ ಬದಲಾವಣೆ ಮಾಡಬಹುದು, ಏಕೆಂದರೆ ಬದಲಾವಣೆ ಕಾಲದ ನಿಯಮ. ಆದರೆ ಸಂವಿಧಾನದ ಮೂಲ ಆಶಯಗಳು ಮಾತ್ರ ಬದಲಾಗಬಾರದು, ಹಾಗೇನಾದರೂ ಆದರೆ ದೇಶದ ಸಾಮಾಜಿಕ ಸಮೀಕರಣವೇ ಹಾಳಾಗುತ್ತದೆ.

ಈಗಿನ ಕೇಂದ್ರ ಸರ್ಕಾರದ ಅತ್ಯಂತ ದೊಡ್ಡ ಅಡಚಣೆ ಅಥವಾ ಶತ್ರು ಎಂದರೆ ನಮ್ಮ ಸಂವಿಧಾನ; ಮುಖ್ಯವಾಗಿ ಅದರ ಮುನ್ನುಡಿ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಆಶಯಗಳು.

ಕೇಂದ್ರದ ಬಿಜೆಪಿ ಸರ್ಕಾರ ಮೊದಲಿನಿಂದಲೂ ಸಮರ್ಥಿಸುತ್ತ ಬಂದಿರುವ ಏಕರೂಪ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರ ಮುಂತಾದ ಘೋಷಣೆಗಳಿಗೆ ದೊಡ್ಡ ಅಡೆತಡೆ ಬರುವುದೇ ಈ ಮೂಲ ಚೌಕಟ್ಟು ತೀರ್ಪಿನಿಂದ; ಹಾಗಾಗಿ ಆಗಾಗ ಅದರ ಬಗ್ಗೆ ಟೀಕೆ ಮಾಡುತ್ತಲೇ ಇರುವುದು ಅದರ ಚಾಳಿ.

ಸಂವಿಧಾನದ ಮೂಲ ಚೌಕಟ್ಟಷ್ಟೇ ಅಲ್ಲ; ಈ ಮೊದಲಿನ ಸರ್ಕಾರಗಳು, ಕಟ್ಟಿದ ಕಟ್ಟಡಗಳು, ಬರೆದ ಪುಸ್ತಕ, ಇತಿಹಾಸ, ರಚಿಸಿದ ಕಲಾಕೃತಿ ಏನೇ ಇರಲಿ ಎಲ್ಲವನ್ನೂ ಒಡೆದು, ಸತ್ಯದ ಬೆಂಬಲವಿಲ್ಲದ ತನ್ನ ಛಾಪನ್ನು ಮೂಡಿಸಲು ಪ್ರಸಕ್ತ ಸರ್ಕಾರ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಪ್ರಜಾಪ್ರಭುತ್ವದಲ್ಲಿ ಜನರೇ ಆರಿಸಿದ ಸರ್ಕಾರಕ್ಕೆ ಸರ್ವೋಚ್ಚ ಅಧಿಕಾರ ಇರಬೇಕೇ ಹೊರತು ನ್ಯಾಯಾಂಗಕ್ಕೆ ಅಲ್ಲ ಎಂದು ಉಪರಾಷ್ಟ್ರಪತಿಗಳು ಹೇಳಿದಾಗ ಪ್ರಜೆಗಳ ಹೆಸರಲ್ಲಿ ಪ್ರಜೆಗಳ ಕೈಯ್ಯಿಂದಲೇ ಪ್ರಜಾಪ್ರಭುತ್ವದ ಕೊಲೆ ಮಾಡಿಸುತ್ತಿರುವ ಹುನ್ನಾರದಂತೆ ಅದು ಭಾಸವಾಗುತ್ತಿದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...