Homeಅಂತರಾಷ್ಟ್ರೀಯಖಮೇನಿ ಮೇಲಿನ ದಾಳಿಯು 'ಸಂಪೂರ್ಣ ಯುದ್ಧ'ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ “ಸಂಪೂರ್ಣ ಯುದ್ಧ” ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ.

“ಇರಾನ್‌ನಲ್ಲಿ ಹೊಸ ನಾಯಕತ್ವವನ್ನು ಹುಡುಕುವ ಸಮಯ” ಎಂದು ಟ್ರಂಪ್ ಶನಿವಾರ ಪೊಲಿಟಿಕೊಗೆ ಹೇಳಿದ ನಂತರ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪೆಜೆಶ್ಕಿಯಾನ್ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

“ನಮ್ಮ ಮಹಾನ್ ನಾಯಕನ ಮೇಲಿನ ಯಾವುದೇ ದಾಳಿಯು ಇರಾನ್ ರಾಷ್ಟ್ರದ ವಿರುದ್ಧ ಸಂಪೂರ್ಣ ಯುದ್ಧಕ್ಕೆ ಸಮಾನವಾಗಿರುತ್ತದೆ” ಎಂದು ಪೆಜೆಶ್ಕಿಯಾನ್ ಬರೆದಿದ್ದಾರೆ.

ಇರಾನ್ ಅಧ್ಯಕ್ಷರು ದೇಶದ ಆರ್ಥಿಕ ಸಂಕಷ್ಟಗಳಿಗೆ ವಾಷಿಂಗ್ಟನ್ ಅನ್ನು ದೂಷಿಸಿದರು. “ದೀರ್ಘಕಾಲದ ದ್ವೇಷ ಮತ್ತು ಯುನೈಟೆಡ್ ಸ್ಟೇಟ್ಸ್, ಅದರ ಮಿತ್ರರಾಷ್ಟ್ರಗಳು ವಿಧಿಸಿರುವ ಅಮಾನವೀಯ ನಿರ್ಬಂಧಗಳು ಇರಾನಿನ ಜನರಿಗೆ ಸಂಕಷ್ಟಕ್ಕೆ ಪ್ರಾಥಮಿಕವಾಗಿ ಕಾರಣ” ಎಂದು ಉಲ್ಲೇಖಿಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ ಖಮೇನಿ ಟ್ರಂಪ್ ಅವರನ್ನು ಅಪರಾಧಿ ಎಂದು ಕರೆದಾಗ ಉಭಯ ರಾಷ್ಟ್ರಗಳ ರಾಜತಾಂತ್ರಿಕ ತಿಕ್ಕಾಟ ತೀವ್ರಗೊಂಡಿದೆ. ಇರಾನ್‌ನಲ್ಲಿ ಇತ್ತೀಚಿನ ದೇಶೀಯ ಅಶಾಂತಿಯ ಅವಧಿಯಲ್ಲಿ ಉಂಟಾದ ಸಾವುನೋವುಗಳು ಮತ್ತು ಹಾನಿಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿದರು.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ದಶಕಗಳ ಆಡಳಿತವನ್ನು ಕೊನೆಗೊಳಿಸಲು ಟ್ರಂಪ್ ಕರೆ ನೀಡಿದರು. ದೇಶವು ನಿರಂತರ ಸಾರ್ವಜನಿಕ ಅಶಾಂತಿಯನ್ನು ಎದುರಿಸುತ್ತಿರುವ ಕಾರಣ ದೇಶಕ್ಕೆ ಹೊಸ ನಾಯಕತ್ವದ ಅಗತ್ಯವಿದೆ ಎಂದು ಹೇಳಿದರು.

ಶನಿವಾರ ಪೊಲಿಟಿಕೊ ಜೊತೆ ಮಾತನಾಡಿದ ಟ್ರಂಪ್, “ಇರಾನ್‌ನಲ್ಲಿ ಹೊಸ ನಾಯಕತ್ವವನ್ನು ಹುಡುಕುವ ಸಮಯ ಬಂದಿದೆ” ಎಂದು ಹೇಳಿದರು. ರಾಜಕೀಯ ದಬ್ಬಾಳಿಕೆ, ಆರ್ಥಿಕ ಸಂಕಷ್ಟ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಮೇಲಿನ ಸಾರ್ವಜನಿಕ ಕೋಪದಿಂದ ಈ ಪ್ರದರ್ಶನಗಳು ನಡೆದಿವೆ ಎಂದು ಹೇಳಿದ್ದರು.

ಹಿಂಸೆ ಮತ್ತು ಭಯದ ಮೂಲಕ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಟ್ರಂಪ್, ಇರಾನ್ ನಾಯಕತ್ವವನ್ನು ತೀವ್ರವಾಗಿ ಟೀಕಿಸಿದರು. ಮರಣದಂಡನೆ ವಿಧಿಸಲಾಗಿದೆ ಎಂದು ಆರೋಪಿಸುತ್ತಾ, “ಎರಡು ದಿನಗಳ ಹಿಂದೆ 800 ಕ್ಕೂ ಹೆಚ್ಚು ಜನರನ್ನು ಗಲ್ಲಿಗೇರಿಸದಿರುವುದು ಅವರು ತೆಗೆದುಕೊಂಡ ಅತ್ಯುತ್ತಮ ನಿರ್ಧಾರ” ಎಂದರು.

ಇರಾನ್‌ನ ಪ್ರಸ್ತುತ ನಾಯಕತ್ವವು ಅಧಿಕಾರದಲ್ಲಿ ಉಳಿಯಲು ದಮನವನ್ನು ಅವಲಂಬಿಸಿದೆ ಎಂದು ಅಮೆರಿಕ ಅಧ್ಯಕ್ಷರು ವಾದಿಸಿದರು. ದೇಶದ ಪತನಕ್ಕೆ ಖಮೇನಿ ಅವರನ್ನು ದೂಷಿಸಿದ ಟ್ರಂಪ್, “ದೇಶದ ಸಂಪೂರ್ಣ ವಿನಾಶ”ದ ಅಧ್ಯಕ್ಷತೆಯನ್ನು ಸರ್ವೋಚ್ಚ ನಾಯಕ ವಹಿಸಿದ್ದಾರೆ. ಭಿನ್ನಾಭಿಪ್ರಾಯವನ್ನು ನಿಗ್ರಹಿಸಲು ಭಾರೀ ಹಿಂಸಾಚಾರವನ್ನು ಬಳಸುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...