Homeಚಳವಳಿಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಬೋರ್ಡ್‌ ವಿಷಯಕ್ಕೆ ಸಂಬಂಧಿಸಿದಂತೆ ಮಾದಿಗ ಸಮುದಾಯದ ಮೇಲೆ ಪ್ರಬಲ ಕೋಮಿನ ಜನರು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮೇ 30ರಂದು ಕಾರಟಗಿ ಬಂದ್‌ಗೆ ಕರೆ ನೀಡಲಾಗಿದೆ.

ಮಾದಿಗ ಸಮುದಾಯ ಕೇರಿಯ ಪಕ್ಕದಲ್ಲಿ ಸ್ಥಾಪಿಸಲಾಗಿದ್ದ ವಾಲ್ಮೀಕಿ ಸಂಘದ ನಾಮಫಲಕದ ಬದಿಯಲ್ಲಿ ಅಂಬೇಡ್ಕರ್ ಯುವಕ ಸಂಘದ ಬೋರ್ಡ್ ಹಾಕುವುದನ್ನು ವಿರೋಧಿಸಿ ಬೇಡ ಸಮುದಾಯದವರು ವಿರೋಧಿಸಿದ್ದರು. ಆದರೆ ನಮ್ಮ ಕಾಲೋನಿಯಲ್ಲಿ ಅಂಬೇಡ್ಕರ್ ಬೋರ್ಡ್ ಹಾಕುತ್ತೇವೆ ಎಂದು ಮಾದಿಗ ಸಮುದಾಯದ ಯುವಕರು ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದರು. ಬೋರ್ಡ್ ಹಾಕಲು ಮುಂದಾದಾಗ ಮೇ 22 ರ ರಾತ್ರಿ ಗ್ರಾಮದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮಾದಿಗ ಸಮುದಾಯ ಜನರ ಮೇಲೆ ವಾಲ್ಮೀಕಿ ಮತ್ತು ಇತರ ಸಮುದಾಯದ ಜನರು ಕಟ್ಟಿಗೆ ಮತ್ತು ಮಾರಾಕಾಸ್ತ್ರಗಳಿಂದ ಥಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ 10 ದಲಿತರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹಲವರಿಗೆ ಹೊಲಿಗೆ ಹಾಕುವಷ್ಟು ಗಾಯಗಳಾಗಿದ್ದು, ಒಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರನು ಬಂಧಿಸಲಾಗಿದೆ. ನಂತರ ಪ್ರಭಾವಿ ಕೋಮಿನ ಮುಖಂಡರು ಪೆಟ್ಟು ತಿಂದ ದಲಿತರು ಸೇರಿ 66 ಜನರ ಮೇಲೆ ಪ್ರತಿ ದೂರು ನೀಡಿದ್ದಾರೆ.

ದಲಿತರ ಮೇಲಿನ ಹಲ್ಲೆ ಖಂಡಿಸಿ, ಪ್ರತಿ ದೂರು ಕೈಬಿಡಬೇಕೆಂದು ಒತ್ತಾಯಿಸಿ ಮಾದಿಗ ದಂಡೋರ ಸಂಘಟನೆಯು ಮೇ 30 ರಂದು ಕಾರಟಗಿ ಬಂದ್ ಪ್ರತಿಭಟನೆಗೆ ಕರೆ ನೀಡಿದೆ. ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.

ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ನೆರೆಯಿಂದಾಗ ಮನೆ ಕಳೆದುಕೊಂಡ ದಲಿತರಿಗೆ ಹಿಂದೆ ಸರ್ಕಾರ ಜಮೀನು ನೀಡಿತು. ಅಲ್ಲಿಯವರೆಗೂ ಜೀತ ಮಾಡುತ್ತಿದ್ದವರು ದುಡಿದು ಬದುಕಲು ಆರಂಭಿಸಿದರು. ತಮ್ಮ ಮಕ್ಕಳನ್ನು ಓದಿಸಿದರು. ಈಗ ಅಂಬೇಡ್ಕರ್ ಸಂಘ ಕಟ್ಟಿಕೊಂಡಿದ್ದಾರೆ. ಇದೆಲ್ಲವೂ ಊರಿನ ಪ್ರಬಲ ಜಾತಿಯವರಿಗೆ ನುಂಗಲಾರದ ತುತ್ತಾಗಿತ್ತು. ಅಲ್ಲದೆ ಗ್ರಾಮದ ಹೋಟೆಲ್ ಮತ್ತು ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆಂದು ದಲಿತರು ಆಗ್ರಹಿಸಿದ್ದರು. ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಈ ಕುರಿತು ಶಾಂತಿ ಸಭೆ ನಡೆಸಿದ್ದರು. ಇವೆಲ್ಲರಿಂದ ದ್ವೇಷ ಸಾಧಿಸಿ ಮಾದಿಗ ಸಮುದಾಯದ ಮೇಲೆ ಹಲ್ಲೆ ನಡೆಸಲಾಗಿದೆ” ಎಂದಿದ್ದಾರೆ.

ಅಟ್ರಾಸಿಟಿ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಊರಿನ ಪ್ರಬಲ ಜಾತಿಗಳು ವಾಲ್ಮೀಕಿ ಸಮುದಾಯದವರನ್ನು ಮುಂದೆ ಬಿಟ್ಟು ಈ ಕೃತ್ಯ ಎಸಗಿವೆ. ಇನ್ನು ಕ್ಷೇತ್ರದ ದಲಿತ ಶಾಸಕ ಬಸವರಾಜ ದಡೇಸಗೂರು ಕೃತ್ಯವನ್ನು ಖಂಡಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಗ್ರಾಮಕ್ಕೆ KMRV, CPI(ML), DSS ಮಾದಿಗ ದಂಡೋರ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ನೊಂದ ಕುಟುಂಬಗಳ ಕುಂದು ಕೊರತೆ ಆಲಿಸಿವೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಮಂಡಳಿಯ ಅಧ್ಯಕ್ಷ ಭೇಟಿ ನೀಡಿ ಸಾಂತ್ವನ ಸೌಲಭ್ಯಗಳನ್ನು ದೊರಕಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಕರ್ನಾಟಕದಲ್ಲಿ ಅಸ್ಪೃಶ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...