Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

- Advertisement -
- Advertisement -

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ ನಡೆದಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ ಎದುರು ಜಮಾಯಿಸಿದ ಪತ್ರಕರ್ತರು, ದೇಶಾದ್ಯಂತ ಪತ್ರಕರ್ತರಿಗೆ ಸಮರ್ಪಕ ರಕ್ಷಣೆ ನೀಡುವಂತೆ ಗೃಹ ಸಚಿವ ಅಮಿತ್‌ ಶಾರವರಿಗೆ ಬರೆದಿರುವ ಪತ್ರವನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಅನೇಕ ಪತ್ರಕರ್ತರ ಮೇಲೆ ಹಿಂಸಾತ್ಮಕ ದಾಳಿಗಳು ನಡೆಯುತ್ತಿವೆ. ಕೇವಲ ತಮ್ಮ ಪತ್ರಕರ್ತರ ವೃತ್ತಿ ಮಾಡುತ್ತಿರುವಾಗಲೇ ಅವರ ಮೇಲೆ ದಾಳಿ ಮಾಡುವುದು ಹೇಡಿತನದ ಕೆಲಸವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಸದಸ್ಯರು ವೃತ್ತಿಯಲ್ಲಿರುವಾಗ ಯಾವುದೇ ಸ್ವಂತ ಅಭಿಪ್ರಾಯವನ್ನು ಹೊಂದಿರುವುದಿಲ್ಲ. ಅವರು ಏನು ನೋಡುತ್ತಾರೋ ಅದನ್ನೇ ವರದಿ ಮಾಡುತ್ತಾರೆ. ಹಾಗಾಗಿ ಅವರ ಮೇಲೆ ಹಲ್ಲೆ ಮಾಡುವುದು ಸಮಂಜಸವಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಸರ್, ಈ ಮಾಧ್ಯಮ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸುವುದು ಸೇರಿದಂತೆ ಹಲವು ರೀತಿಯ ಕ್ರೂರ ದಾಳಿಗೆ ಒಳಗಾಗಿದ್ದರು ಎಂಬುದು ನಿಮಗೆ ತಿಳಿದಿದೆ. ಅವರಿಗಾದ ಮಾನಸಿಕ ಮತ್ತು ದೈಹಿಕವಾಗಿ ತೀವ್ರತರದ  ಗಾಯಗಳಾಗಿದ್ದರೂ ಸಹ ದೆಹಲಿ ಪೊಲೀಸ್ ಅಧಿಕಾರಿಗಳು ಯಾವುದೇ ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

ಪತ್ರಕರ್ತರಾದ ನಾವು ನಮ್ಮ ಜೀವನ ಮತ್ತು ಕುಟುಂಬಗಳನ್ನು ಪಣಕ್ಕಿಟ್ಟು ಸತ್ಯವನ್ನು ಬಹಿರಂಗಪಡಿಸಲು ಪ್ರಯತ್ನಿಸುತ್ತೇವೆ. ನಾವು ಹೆಮ್ಮೆಯ ದೇಶಭಕ್ತರಾಗಿದ್ದು, ಇತರರು ಮಾಡುವಂತೆಯೇ ಸಮಾಜಕ್ಕೆ ಸಹಾಯ ಮಾಡಲು ನಮ್ಮ ಕೆಲಸವನ್ನು ಮಾಡುತ್ತೇವೆ. ನಮಗೆ ಹೊಡೆಯುತ್ತೇವೆ ಮತ್ತು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕುವುದು ಕೇವಲ ನಮ್ಮ ಧ್ವನಿಯನ್ನು ಹತ್ತಿಕ್ಕಿದಂತೆ ಮಾತ್ರವಲ್ಲ ಅವರು ದೇಶದ ಕತ್ತು ಹಿಸುಕುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಹಾಗಾಗಿ ದೆಹಲಿಯ ದಾಳಿಕೋರರ ಮೇಲೆ ಕೇಸು ದಾಖಲಿಸಿ ಕಾನೂನು ರೀತ್ಯಾ ಶಿಕ್ಷೆ ನೀಡಬೇಕೆಂದು ಪತ್ರಕರ್ತರ ಸಮನ್ವಯ ಸಮತಿ ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ವಿಜಯ್‌ ಗ್ರೋವರ್‌, ಮಾಯಾ ಶರ್ಮಾ, ಎಂ.ಎ ಪೊನ್ನಪ್ಪ, ನಿಹಾಲ್‌ ಕಿದ್ವಾಯಿ, ದೀಪ ಬಾಲಕೃಷ್ಣನ್‌ ಮತ್ತು ಸುನೀಲ್‌ ಶಿರಸಂಗಿ ಸೇರಿದಂತೆ ಹಲವು ಪತ್ರಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...