Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

- Advertisement -
- Advertisement -

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ ನಡೆದಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ ಎದುರು ಜಮಾಯಿಸಿದ ಪತ್ರಕರ್ತರು, ದೇಶಾದ್ಯಂತ ಪತ್ರಕರ್ತರಿಗೆ ಸಮರ್ಪಕ ರಕ್ಷಣೆ ನೀಡುವಂತೆ ಗೃಹ ಸಚಿವ ಅಮಿತ್‌ ಶಾರವರಿಗೆ ಬರೆದಿರುವ ಪತ್ರವನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಅನೇಕ ಪತ್ರಕರ್ತರ ಮೇಲೆ ಹಿಂಸಾತ್ಮಕ ದಾಳಿಗಳು ನಡೆಯುತ್ತಿವೆ. ಕೇವಲ ತಮ್ಮ ಪತ್ರಕರ್ತರ ವೃತ್ತಿ ಮಾಡುತ್ತಿರುವಾಗಲೇ ಅವರ ಮೇಲೆ ದಾಳಿ ಮಾಡುವುದು ಹೇಡಿತನದ ಕೆಲಸವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಸದಸ್ಯರು ವೃತ್ತಿಯಲ್ಲಿರುವಾಗ ಯಾವುದೇ ಸ್ವಂತ ಅಭಿಪ್ರಾಯವನ್ನು ಹೊಂದಿರುವುದಿಲ್ಲ. ಅವರು ಏನು ನೋಡುತ್ತಾರೋ ಅದನ್ನೇ ವರದಿ ಮಾಡುತ್ತಾರೆ. ಹಾಗಾಗಿ ಅವರ ಮೇಲೆ ಹಲ್ಲೆ ಮಾಡುವುದು ಸಮಂಜಸವಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಸರ್, ಈ ಮಾಧ್ಯಮ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸುವುದು ಸೇರಿದಂತೆ ಹಲವು ರೀತಿಯ ಕ್ರೂರ ದಾಳಿಗೆ ಒಳಗಾಗಿದ್ದರು ಎಂಬುದು ನಿಮಗೆ ತಿಳಿದಿದೆ. ಅವರಿಗಾದ ಮಾನಸಿಕ ಮತ್ತು ದೈಹಿಕವಾಗಿ ತೀವ್ರತರದ  ಗಾಯಗಳಾಗಿದ್ದರೂ ಸಹ ದೆಹಲಿ ಪೊಲೀಸ್ ಅಧಿಕಾರಿಗಳು ಯಾವುದೇ ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

ಪತ್ರಕರ್ತರಾದ ನಾವು ನಮ್ಮ ಜೀವನ ಮತ್ತು ಕುಟುಂಬಗಳನ್ನು ಪಣಕ್ಕಿಟ್ಟು ಸತ್ಯವನ್ನು ಬಹಿರಂಗಪಡಿಸಲು ಪ್ರಯತ್ನಿಸುತ್ತೇವೆ. ನಾವು ಹೆಮ್ಮೆಯ ದೇಶಭಕ್ತರಾಗಿದ್ದು, ಇತರರು ಮಾಡುವಂತೆಯೇ ಸಮಾಜಕ್ಕೆ ಸಹಾಯ ಮಾಡಲು ನಮ್ಮ ಕೆಲಸವನ್ನು ಮಾಡುತ್ತೇವೆ. ನಮಗೆ ಹೊಡೆಯುತ್ತೇವೆ ಮತ್ತು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕುವುದು ಕೇವಲ ನಮ್ಮ ಧ್ವನಿಯನ್ನು ಹತ್ತಿಕ್ಕಿದಂತೆ ಮಾತ್ರವಲ್ಲ ಅವರು ದೇಶದ ಕತ್ತು ಹಿಸುಕುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಹಾಗಾಗಿ ದೆಹಲಿಯ ದಾಳಿಕೋರರ ಮೇಲೆ ಕೇಸು ದಾಖಲಿಸಿ ಕಾನೂನು ರೀತ್ಯಾ ಶಿಕ್ಷೆ ನೀಡಬೇಕೆಂದು ಪತ್ರಕರ್ತರ ಸಮನ್ವಯ ಸಮತಿ ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ವಿಜಯ್‌ ಗ್ರೋವರ್‌, ಮಾಯಾ ಶರ್ಮಾ, ಎಂ.ಎ ಪೊನ್ನಪ್ಪ, ನಿಹಾಲ್‌ ಕಿದ್ವಾಯಿ, ದೀಪ ಬಾಲಕೃಷ್ಣನ್‌ ಮತ್ತು ಸುನೀಲ್‌ ಶಿರಸಂಗಿ ಸೇರಿದಂತೆ ಹಲವು ಪತ್ರಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...