Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

- Advertisement -
- Advertisement -

ದೆಹಲಿ ಹಿಂಸಾಚಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಬೆಂಗಳೂರಿನಲ್ಲಿ ಪತ್ರಕರ್ತರಿಂದ ಪ್ರತಿಭಟನೆ ನಡೆದಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ ಎದುರು ಜಮಾಯಿಸಿದ ಪತ್ರಕರ್ತರು, ದೇಶಾದ್ಯಂತ ಪತ್ರಕರ್ತರಿಗೆ ಸಮರ್ಪಕ ರಕ್ಷಣೆ ನೀಡುವಂತೆ ಗೃಹ ಸಚಿವ ಅಮಿತ್‌ ಶಾರವರಿಗೆ ಬರೆದಿರುವ ಪತ್ರವನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಅನೇಕ ಪತ್ರಕರ್ತರ ಮೇಲೆ ಹಿಂಸಾತ್ಮಕ ದಾಳಿಗಳು ನಡೆಯುತ್ತಿವೆ. ಕೇವಲ ತಮ್ಮ ಪತ್ರಕರ್ತರ ವೃತ್ತಿ ಮಾಡುತ್ತಿರುವಾಗಲೇ ಅವರ ಮೇಲೆ ದಾಳಿ ಮಾಡುವುದು ಹೇಡಿತನದ ಕೆಲಸವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಸದಸ್ಯರು ವೃತ್ತಿಯಲ್ಲಿರುವಾಗ ಯಾವುದೇ ಸ್ವಂತ ಅಭಿಪ್ರಾಯವನ್ನು ಹೊಂದಿರುವುದಿಲ್ಲ. ಅವರು ಏನು ನೋಡುತ್ತಾರೋ ಅದನ್ನೇ ವರದಿ ಮಾಡುತ್ತಾರೆ. ಹಾಗಾಗಿ ಅವರ ಮೇಲೆ ಹಲ್ಲೆ ಮಾಡುವುದು ಸಮಂಜಸವಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಸರ್, ಈ ಮಾಧ್ಯಮ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸುವುದು ಸೇರಿದಂತೆ ಹಲವು ರೀತಿಯ ಕ್ರೂರ ದಾಳಿಗೆ ಒಳಗಾಗಿದ್ದರು ಎಂಬುದು ನಿಮಗೆ ತಿಳಿದಿದೆ. ಅವರಿಗಾದ ಮಾನಸಿಕ ಮತ್ತು ದೈಹಿಕವಾಗಿ ತೀವ್ರತರದ  ಗಾಯಗಳಾಗಿದ್ದರೂ ಸಹ ದೆಹಲಿ ಪೊಲೀಸ್ ಅಧಿಕಾರಿಗಳು ಯಾವುದೇ ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದು ಕೇವಲ ದೆಹಲಿ ಮಾತ್ರವಲ್ಲ, ಮಾಧ್ಯಮಗಳು ದೇಶಾದ್ಯಂತ ಇಂತಹ ಸಂದರ್ಭಗಳನ್ನು ಎದುರಿಸುತ್ತಿವೆ ಮತ್ತು ಬೆಂಗಳೂರು ಇದಕ್ಕೆ ಹೊರತಾಗಿಲ್ಲ ಎಂದು ಪತ್ರಕರ್ತರು ದೂರಿದ್ದಾರೆ.

ಪತ್ರಕರ್ತರಾದ ನಾವು ನಮ್ಮ ಜೀವನ ಮತ್ತು ಕುಟುಂಬಗಳನ್ನು ಪಣಕ್ಕಿಟ್ಟು ಸತ್ಯವನ್ನು ಬಹಿರಂಗಪಡಿಸಲು ಪ್ರಯತ್ನಿಸುತ್ತೇವೆ. ನಾವು ಹೆಮ್ಮೆಯ ದೇಶಭಕ್ತರಾಗಿದ್ದು, ಇತರರು ಮಾಡುವಂತೆಯೇ ಸಮಾಜಕ್ಕೆ ಸಹಾಯ ಮಾಡಲು ನಮ್ಮ ಕೆಲಸವನ್ನು ಮಾಡುತ್ತೇವೆ. ನಮಗೆ ಹೊಡೆಯುತ್ತೇವೆ ಮತ್ತು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕುವುದು ಕೇವಲ ನಮ್ಮ ಧ್ವನಿಯನ್ನು ಹತ್ತಿಕ್ಕಿದಂತೆ ಮಾತ್ರವಲ್ಲ ಅವರು ದೇಶದ ಕತ್ತು ಹಿಸುಕುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಹಾಗಾಗಿ ದೆಹಲಿಯ ದಾಳಿಕೋರರ ಮೇಲೆ ಕೇಸು ದಾಖಲಿಸಿ ಕಾನೂನು ರೀತ್ಯಾ ಶಿಕ್ಷೆ ನೀಡಬೇಕೆಂದು ಪತ್ರಕರ್ತರ ಸಮನ್ವಯ ಸಮತಿ ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ವಿಜಯ್‌ ಗ್ರೋವರ್‌, ಮಾಯಾ ಶರ್ಮಾ, ಎಂ.ಎ ಪೊನ್ನಪ್ಪ, ನಿಹಾಲ್‌ ಕಿದ್ವಾಯಿ, ದೀಪ ಬಾಲಕೃಷ್ಣನ್‌ ಮತ್ತು ಸುನೀಲ್‌ ಶಿರಸಂಗಿ ಸೇರಿದಂತೆ ಹಲವು ಪತ್ರಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...