Homeಮುಖಪುಟಮೋದಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ: 'ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಿದ್ದಾರೆ' ಎಂದ ಬಿಜೆಪಿ

ಮೋದಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ: ‘ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಿದ್ದಾರೆ’ ಎಂದ ಬಿಜೆಪಿ

- Advertisement -
- Advertisement -

‘ಮೋದಿ-ಆರ್‌ಎಸ್‌ಎಸ್‌ ಮಾತ್ರ ಸಂಪೂರ್ಣ ಹಿಂದೂ ಅಲ್ಲ” ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಭಾರತೀಯ ಜನತಾ ಪಕ್ಷವು ಸಂಸತ್ತಿನಲ್ಲಿ ತಿರುಗೇಟು ನೀಡಿದೆ. ‘ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕರು ಹಿಂದೂಗಳನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿದರು.

ಇದು ಸಂವಿಧಾನದ ಪ್ರತಿ ಮತ್ತು ಭಗವಾನ್ ಶಿವ, ಪ್ರವಾದಿ ಮೊಹಮ್ಮದ್, ಜೀಸಸ್ ಕ್ರೈಸ್ಟ್ ಮತ್ತು ಗುರು ನಾನಕ್ ಸಿಂಗ್ ಸೇರಿದಂತೆ ಧಾರ್ಮಿಕ ವ್ಯಕ್ತಿಗಳ ಫೋಟೋಗಳೊಂದಿಗೆ ಸದನಕ್ಕೆ ಬಂಸಿದ್ದ ರಾಹುಲ್, ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ವಿರುದ್ಧ ತೀವ್ರ ದಾಳಿಯನ್ನು ಪ್ರಾರಂಭಿಸಿದರು. ನೀವು ನಿಜವಾಗಿ ಎಲ್ಲಾ ಹಿಂದೂಗಳನ್ನು ಪ್ರತಿನಿಧಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರ ಟೀಕೆಗಳನ್ನು ಖಂಡಿಸಲು ಮೋದಿ ಎರಡು ಬಾರಿ ಎದ್ದುನಿಂತಿದ್ದು ವಿಶೇಷವಾಗಿತ್ತು. “ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಷಯವಾಗಿದೆ…” ಎಂದು ಮೋದಿ ಮೊದಲ ಬಾರಿಗೆ ಚರ್ಚೆ ಮಧ್ಯದಲ್ಲಿ ಎದ್ದು ಹೇಳಿದರು.

ಅವರ ಎರಡನೆಯ ಹಸ್ತಕ್ಷೇಪದಲ್ಲಿ ರಾಹುಲ್ ಗಾಂಧಿ ಅವರನ್ನು ಗೇಲಿ ಮಾಡಲು ಬಳಸಿಕೊಂಡರು; ಇಂದು ರಾಹುಲ್ ಗಾಂಧಿಯವರು ನಿರ್ವಹಿಸುತ್ತಿರುವ ವಿರೋಧ ಪಕ್ಷದ ನಾಯಕನ ಹುದ್ದೆಯನ್ನು ಗೌರವಿಸಲು ಸಂವಿಧಾನವು ತನಗೆ ಕಲಿಸಿದೆ ಎಂದು ಪ್ರಧಾನಿ ಹೇಳಿದಾ, ಆಡಳಿತ ಪಕ್ಷದ ಸದಸ್ಯರು ನಗುವ ಮೂಲಕ ಬೆಂಬಲ ಸೂಚಿಸಿದರು.

“ಸಂತಸವಾಗುತ್ತಿದೆ… ಬಿಜೆಪಿಯವರು ನನ್ನ ನಂತರ ‘ಜೈ ಸಂವಿಧಾನ್’ ಎಂದು ಪುನರಾವರ್ತನೆ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.

ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಆರೋಪ ಮಾಡಿದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮೇಲೆ ರಾಹುಲ್ ಗಾಂಧಿಯವರ ಮೊನಚಾದ ದಾಳಿಯೇ ಇಂದಿನ ಗದ್ದಲಕ್ಕೆ ನಿರ್ದಿಷ್ಟ ಪ್ರಚೋದನೆಯಾಗಿದೆ. “ನಮ್ಮ ಮಹಾಪುರುಷರು ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ (ಆದರೆ) ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ದ್ವೇಷದ ಬಗ್ಗೆ ಮಾತ್ರ ಮಾತನಾಡುತ್ತಾರೆ … ನೀವು ನಿಜವಾದ ಹಿಂದೂ ಅಲ್ಲವೇ ಅಲ್ಲ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರ ಆವೇಶಭರಿತ ಭಾಷಣ

ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು “ಭಾರತದ ಕಲ್ಪನೆಯ ಮೇಲೆ… ಸಂವಿಧಾನದ ಮೇಲೆ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ವಿರೋಧಿಸಿದ ಜನರ ಮೇಲೆ ಪೂರ್ಣ ಪ್ರಮಾಣದ ಮತ್ತು ವ್ಯವಸ್ಥಿತ ದಾಳಿ” ಎಂದು ಹೇಳುವುದರ ಪ್ರಾರಂಭಿಸಿದರು. ಅನೇಕ ವಿರೋಧ ಪಕ್ಷದ ನಾಯಕರ ಮೇಲೆ ವೈಯಕ್ತಿಕವಾಗಿ ಹಲ್ಲೆ ಮಾಡಲಾಯಿತು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಗುಡುಗಿದರು.

“ನೀವು ಶಿವನ ಚಿತ್ರವನ್ನು ನೋಡಿದರೆ ಹಿಂದೂಗಳು ಎಂದಿಗೂ ಭಯ ಮತ್ತು ದ್ವೇಷವನ್ನು ಹರಡಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆ.. ಆದರೆ ಬಿಜೆಪಿ 24×7 ಭಯ ಮತ್ತು ದ್ವೇಷವನ್ನು ಹರಡುತ್ತದೆ” ಎಂದು ಹೇಳಿದ ರಾಹುಲ್ ಗಾಂಧಿ, ಪ್ರವಾದಿ ಮೊಹಮ್ಮದ್ ಮತ್ತು ಗುರುನಾನಕ್ ಸಿಂಗ್ ಅವರ ಚಿತ್ರಗಳನ್ನು ಸಹ ಪ್ರದರ್ಶಿಸಿದರು.

ಇದನ್ನೂ ಓದಿ; ‘ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ..’; ಸದನದಲ್ಲಿ ಕಿಚ್ಚುಹಚ್ಚಿದ ರಾಹುಲ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...