Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...