Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...