Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...