Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...