Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...