Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...