Homeಕರ್ನಾಟಕಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್ ನೌಕರರನ್ನು ಮಾತುಕತೆಗೆ ಕರೆಸಿ, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪ ಕೇಳಿಬಂದಿದೆ.

ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡರ ನೇತೃತ್ವದಲ್ಲಿ ನೌಕರರ ಸಂಘದ ದ್ವಾರದಲ್ಲಿ ಎನ್.ಪಿ.ಎಸ್. ನೌಕರರು ಕೆಲಕಾಲ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದೇ ವೇಳೆ ನಿಂಗೇಗೌಡ, ಶಾಂತರಾಮ್ ಅವರು ಷಡಕ್ಷರಿ ಮತ್ತು ಅವರ ತಂಡದಿಂದಾದ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಘಟನೆಯೂ ನಡೆದಿದೆ.

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ ಘಟನೆಯ ವಿವರ ನೀಡಿದರು.

“ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಕ್ಷರಿಯವರು ಇಂದು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ಶಾಂತರಾಮ್ ತಿಳಿಸಿದರು.

“ಎನ್‌ಪಿಎಸ್ ನೌಕರರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದೆವು. ಸರ್ಕಾರಿ ನೌಕರರ ಸಂಘವು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ಕೊಡಬೇಕು. ಆದೇಶ ಆಗುವವರೆಗೂ ಹೋರಾಟವನ್ನು ವಾಪಸ್‌ ತೆಗೆದುಕೊಳ್ಳಬಾರದು ಎಂದು ಬೇಡಿಕೆಯನ್ನು ನಾವು ಇಟ್ಟೆವು. ಆದರೆ ಅವರು ಹಾರಿಕೆಯ ಉತ್ತರ ಕೊಟ್ಟರು. ಚರ್ಚೆ ಮಾಡಲು ಅವಕಾಶ ನೀಡದೆ ತಮ್ಮ ಬೆಂಬಲಿಗರಿಂದ ತಳ್ಳಾಡಿಸಿ, ಹಲ್ಲೆ ಮಾಡಿಸಿ ಹೊರಗೆ ದೂಡಿದರು” ಎಂದು ಬೇಸರ ವ್ಯಕ್ತಪಡಿಸಿದರು.

“ಸರ್ಕಾರಿ ನೌಕರರ ಸಂಘದ ಮುಂದಿನ ನಡೆಯೇನು ಎಂಬುದನ್ನು ಗಮನಿಸಿ ಎನ್‌ಪಿಎಸ್ ನೌಕರರ ಸಂಘ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಸಭೆ ನಡೆಸಲಾಗುವುದು. ಅಧ್ಯಕ್ಷರ ಮುಂದೆಯೇ ಗೂಂಡಾಗಳು ಹಲ್ಲೆ ನಡೆಸುತ್ತಿರುವಾಗಲೂ ಅವರು ಮಧ್ಯ ಪ್ರವೇಶಿಸಲಿಲ್ಲ. ಎಲ್ಲರಿಗೂ ಮಾತನಾಡಲು ಅವಕಾಶ ಕೊಡಿಸುತ್ತೇನೆ ಎಂಬ ಮಾತನ್ನೂ ಹೇಳದೆ ಹೊರಗೆ ದಬ್ಬಲಾಯಿತು” ಎಂದು ವಿಷಾದಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅವರು, “ಷಡಕ್ಷರಿಯವರು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಈಗಾಗಲೇ ಈ ನಿರ್ಣಯಗಳನ್ನು ಮಂಡಿಸಿದ್ದೇವೆ. ಎಲ್ಲರಿಗೂ ಒಪ್ಪಿಗೆಯೇ ಎಂದು ಕೇಳಿದರು. ಚರ್ಚೆ ಮಾಡಲು ಅವಕಾಶ ನೀಡಿ ಎಂದು ಒತ್ತಾಯಿಸಿದೆವು. ನೀವು ಕೊಟ್ಟ ಭರವಸೆ ಈಡೇರಿಲ್ಲ ಎಂದೆವು. ಆದೇಶ ಆಗುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ನಾವು ಹೇಳಲು ಪ್ರಯತ್ನಪಟ್ಟೆವು. ಎಲ್ಲ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದನ್ನು ಸಮಸ್ತ ಸರ್ಕಾರಿ ನೌಕರರು ಖಂಡಿಸುತ್ತೇವೆ. ಎನ್‌ಪಿಎಸ್‌ ನೌಕರರ ಹೋರಾಟದ ವಿರುದ್ಧ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೂಪಿಸಿರುವ ಸಂಚಿದು. ಇದಕ್ಕೆ ನಾವು ಧಿಕ್ಕಾರ ಕೂಗುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...