Homeಕರ್ನಾಟಕಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್ ನೌಕರರನ್ನು ಮಾತುಕತೆಗೆ ಕರೆಸಿ, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪ ಕೇಳಿಬಂದಿದೆ.

ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡರ ನೇತೃತ್ವದಲ್ಲಿ ನೌಕರರ ಸಂಘದ ದ್ವಾರದಲ್ಲಿ ಎನ್.ಪಿ.ಎಸ್. ನೌಕರರು ಕೆಲಕಾಲ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದೇ ವೇಳೆ ನಿಂಗೇಗೌಡ, ಶಾಂತರಾಮ್ ಅವರು ಷಡಕ್ಷರಿ ಮತ್ತು ಅವರ ತಂಡದಿಂದಾದ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಘಟನೆಯೂ ನಡೆದಿದೆ.

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ ಘಟನೆಯ ವಿವರ ನೀಡಿದರು.

“ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಕ್ಷರಿಯವರು ಇಂದು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ಶಾಂತರಾಮ್ ತಿಳಿಸಿದರು.

“ಎನ್‌ಪಿಎಸ್ ನೌಕರರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದೆವು. ಸರ್ಕಾರಿ ನೌಕರರ ಸಂಘವು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ಕೊಡಬೇಕು. ಆದೇಶ ಆಗುವವರೆಗೂ ಹೋರಾಟವನ್ನು ವಾಪಸ್‌ ತೆಗೆದುಕೊಳ್ಳಬಾರದು ಎಂದು ಬೇಡಿಕೆಯನ್ನು ನಾವು ಇಟ್ಟೆವು. ಆದರೆ ಅವರು ಹಾರಿಕೆಯ ಉತ್ತರ ಕೊಟ್ಟರು. ಚರ್ಚೆ ಮಾಡಲು ಅವಕಾಶ ನೀಡದೆ ತಮ್ಮ ಬೆಂಬಲಿಗರಿಂದ ತಳ್ಳಾಡಿಸಿ, ಹಲ್ಲೆ ಮಾಡಿಸಿ ಹೊರಗೆ ದೂಡಿದರು” ಎಂದು ಬೇಸರ ವ್ಯಕ್ತಪಡಿಸಿದರು.

“ಸರ್ಕಾರಿ ನೌಕರರ ಸಂಘದ ಮುಂದಿನ ನಡೆಯೇನು ಎಂಬುದನ್ನು ಗಮನಿಸಿ ಎನ್‌ಪಿಎಸ್ ನೌಕರರ ಸಂಘ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಸಭೆ ನಡೆಸಲಾಗುವುದು. ಅಧ್ಯಕ್ಷರ ಮುಂದೆಯೇ ಗೂಂಡಾಗಳು ಹಲ್ಲೆ ನಡೆಸುತ್ತಿರುವಾಗಲೂ ಅವರು ಮಧ್ಯ ಪ್ರವೇಶಿಸಲಿಲ್ಲ. ಎಲ್ಲರಿಗೂ ಮಾತನಾಡಲು ಅವಕಾಶ ಕೊಡಿಸುತ್ತೇನೆ ಎಂಬ ಮಾತನ್ನೂ ಹೇಳದೆ ಹೊರಗೆ ದಬ್ಬಲಾಯಿತು” ಎಂದು ವಿಷಾದಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅವರು, “ಷಡಕ್ಷರಿಯವರು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಈಗಾಗಲೇ ಈ ನಿರ್ಣಯಗಳನ್ನು ಮಂಡಿಸಿದ್ದೇವೆ. ಎಲ್ಲರಿಗೂ ಒಪ್ಪಿಗೆಯೇ ಎಂದು ಕೇಳಿದರು. ಚರ್ಚೆ ಮಾಡಲು ಅವಕಾಶ ನೀಡಿ ಎಂದು ಒತ್ತಾಯಿಸಿದೆವು. ನೀವು ಕೊಟ್ಟ ಭರವಸೆ ಈಡೇರಿಲ್ಲ ಎಂದೆವು. ಆದೇಶ ಆಗುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ನಾವು ಹೇಳಲು ಪ್ರಯತ್ನಪಟ್ಟೆವು. ಎಲ್ಲ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದನ್ನು ಸಮಸ್ತ ಸರ್ಕಾರಿ ನೌಕರರು ಖಂಡಿಸುತ್ತೇವೆ. ಎನ್‌ಪಿಎಸ್‌ ನೌಕರರ ಹೋರಾಟದ ವಿರುದ್ಧ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೂಪಿಸಿರುವ ಸಂಚಿದು. ಇದಕ್ಕೆ ನಾವು ಧಿಕ್ಕಾರ ಕೂಗುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...