Homeಕರ್ನಾಟಕಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್ ನೌಕರರನ್ನು ಮಾತುಕತೆಗೆ ಕರೆಸಿ, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪ ಕೇಳಿಬಂದಿದೆ.

ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡರ ನೇತೃತ್ವದಲ್ಲಿ ನೌಕರರ ಸಂಘದ ದ್ವಾರದಲ್ಲಿ ಎನ್.ಪಿ.ಎಸ್. ನೌಕರರು ಕೆಲಕಾಲ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದೇ ವೇಳೆ ನಿಂಗೇಗೌಡ, ಶಾಂತರಾಮ್ ಅವರು ಷಡಕ್ಷರಿ ಮತ್ತು ಅವರ ತಂಡದಿಂದಾದ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಘಟನೆಯೂ ನಡೆದಿದೆ.

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ ಘಟನೆಯ ವಿವರ ನೀಡಿದರು.

“ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಕ್ಷರಿಯವರು ಇಂದು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ಶಾಂತರಾಮ್ ತಿಳಿಸಿದರು.

“ಎನ್‌ಪಿಎಸ್ ನೌಕರರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದೆವು. ಸರ್ಕಾರಿ ನೌಕರರ ಸಂಘವು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ಕೊಡಬೇಕು. ಆದೇಶ ಆಗುವವರೆಗೂ ಹೋರಾಟವನ್ನು ವಾಪಸ್‌ ತೆಗೆದುಕೊಳ್ಳಬಾರದು ಎಂದು ಬೇಡಿಕೆಯನ್ನು ನಾವು ಇಟ್ಟೆವು. ಆದರೆ ಅವರು ಹಾರಿಕೆಯ ಉತ್ತರ ಕೊಟ್ಟರು. ಚರ್ಚೆ ಮಾಡಲು ಅವಕಾಶ ನೀಡದೆ ತಮ್ಮ ಬೆಂಬಲಿಗರಿಂದ ತಳ್ಳಾಡಿಸಿ, ಹಲ್ಲೆ ಮಾಡಿಸಿ ಹೊರಗೆ ದೂಡಿದರು” ಎಂದು ಬೇಸರ ವ್ಯಕ್ತಪಡಿಸಿದರು.

“ಸರ್ಕಾರಿ ನೌಕರರ ಸಂಘದ ಮುಂದಿನ ನಡೆಯೇನು ಎಂಬುದನ್ನು ಗಮನಿಸಿ ಎನ್‌ಪಿಎಸ್ ನೌಕರರ ಸಂಘ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಸಭೆ ನಡೆಸಲಾಗುವುದು. ಅಧ್ಯಕ್ಷರ ಮುಂದೆಯೇ ಗೂಂಡಾಗಳು ಹಲ್ಲೆ ನಡೆಸುತ್ತಿರುವಾಗಲೂ ಅವರು ಮಧ್ಯ ಪ್ರವೇಶಿಸಲಿಲ್ಲ. ಎಲ್ಲರಿಗೂ ಮಾತನಾಡಲು ಅವಕಾಶ ಕೊಡಿಸುತ್ತೇನೆ ಎಂಬ ಮಾತನ್ನೂ ಹೇಳದೆ ಹೊರಗೆ ದಬ್ಬಲಾಯಿತು” ಎಂದು ವಿಷಾದಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅವರು, “ಷಡಕ್ಷರಿಯವರು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಈಗಾಗಲೇ ಈ ನಿರ್ಣಯಗಳನ್ನು ಮಂಡಿಸಿದ್ದೇವೆ. ಎಲ್ಲರಿಗೂ ಒಪ್ಪಿಗೆಯೇ ಎಂದು ಕೇಳಿದರು. ಚರ್ಚೆ ಮಾಡಲು ಅವಕಾಶ ನೀಡಿ ಎಂದು ಒತ್ತಾಯಿಸಿದೆವು. ನೀವು ಕೊಟ್ಟ ಭರವಸೆ ಈಡೇರಿಲ್ಲ ಎಂದೆವು. ಆದೇಶ ಆಗುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ನಾವು ಹೇಳಲು ಪ್ರಯತ್ನಪಟ್ಟೆವು. ಎಲ್ಲ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದನ್ನು ಸಮಸ್ತ ಸರ್ಕಾರಿ ನೌಕರರು ಖಂಡಿಸುತ್ತೇವೆ. ಎನ್‌ಪಿಎಸ್‌ ನೌಕರರ ಹೋರಾಟದ ವಿರುದ್ಧ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೂಪಿಸಿರುವ ಸಂಚಿದು. ಇದಕ್ಕೆ ನಾವು ಧಿಕ್ಕಾರ ಕೂಗುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...