Homeಕರ್ನಾಟಕಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್ ನೌಕರರನ್ನು ಮಾತುಕತೆಗೆ ಕರೆಸಿ, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪ ಕೇಳಿಬಂದಿದೆ.

ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡರ ನೇತೃತ್ವದಲ್ಲಿ ನೌಕರರ ಸಂಘದ ದ್ವಾರದಲ್ಲಿ ಎನ್.ಪಿ.ಎಸ್. ನೌಕರರು ಕೆಲಕಾಲ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದೇ ವೇಳೆ ನಿಂಗೇಗೌಡ, ಶಾಂತರಾಮ್ ಅವರು ಷಡಕ್ಷರಿ ಮತ್ತು ಅವರ ತಂಡದಿಂದಾದ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಘಟನೆಯೂ ನಡೆದಿದೆ.

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ ಘಟನೆಯ ವಿವರ ನೀಡಿದರು.

“ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಕ್ಷರಿಯವರು ಇಂದು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ಶಾಂತರಾಮ್ ತಿಳಿಸಿದರು.

“ಎನ್‌ಪಿಎಸ್ ನೌಕರರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದೆವು. ಸರ್ಕಾರಿ ನೌಕರರ ಸಂಘವು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ಕೊಡಬೇಕು. ಆದೇಶ ಆಗುವವರೆಗೂ ಹೋರಾಟವನ್ನು ವಾಪಸ್‌ ತೆಗೆದುಕೊಳ್ಳಬಾರದು ಎಂದು ಬೇಡಿಕೆಯನ್ನು ನಾವು ಇಟ್ಟೆವು. ಆದರೆ ಅವರು ಹಾರಿಕೆಯ ಉತ್ತರ ಕೊಟ್ಟರು. ಚರ್ಚೆ ಮಾಡಲು ಅವಕಾಶ ನೀಡದೆ ತಮ್ಮ ಬೆಂಬಲಿಗರಿಂದ ತಳ್ಳಾಡಿಸಿ, ಹಲ್ಲೆ ಮಾಡಿಸಿ ಹೊರಗೆ ದೂಡಿದರು” ಎಂದು ಬೇಸರ ವ್ಯಕ್ತಪಡಿಸಿದರು.

“ಸರ್ಕಾರಿ ನೌಕರರ ಸಂಘದ ಮುಂದಿನ ನಡೆಯೇನು ಎಂಬುದನ್ನು ಗಮನಿಸಿ ಎನ್‌ಪಿಎಸ್ ನೌಕರರ ಸಂಘ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಸಭೆ ನಡೆಸಲಾಗುವುದು. ಅಧ್ಯಕ್ಷರ ಮುಂದೆಯೇ ಗೂಂಡಾಗಳು ಹಲ್ಲೆ ನಡೆಸುತ್ತಿರುವಾಗಲೂ ಅವರು ಮಧ್ಯ ಪ್ರವೇಶಿಸಲಿಲ್ಲ. ಎಲ್ಲರಿಗೂ ಮಾತನಾಡಲು ಅವಕಾಶ ಕೊಡಿಸುತ್ತೇನೆ ಎಂಬ ಮಾತನ್ನೂ ಹೇಳದೆ ಹೊರಗೆ ದಬ್ಬಲಾಯಿತು” ಎಂದು ವಿಷಾದಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅವರು, “ಷಡಕ್ಷರಿಯವರು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಈಗಾಗಲೇ ಈ ನಿರ್ಣಯಗಳನ್ನು ಮಂಡಿಸಿದ್ದೇವೆ. ಎಲ್ಲರಿಗೂ ಒಪ್ಪಿಗೆಯೇ ಎಂದು ಕೇಳಿದರು. ಚರ್ಚೆ ಮಾಡಲು ಅವಕಾಶ ನೀಡಿ ಎಂದು ಒತ್ತಾಯಿಸಿದೆವು. ನೀವು ಕೊಟ್ಟ ಭರವಸೆ ಈಡೇರಿಲ್ಲ ಎಂದೆವು. ಆದೇಶ ಆಗುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ನಾವು ಹೇಳಲು ಪ್ರಯತ್ನಪಟ್ಟೆವು. ಎಲ್ಲ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದನ್ನು ಸಮಸ್ತ ಸರ್ಕಾರಿ ನೌಕರರು ಖಂಡಿಸುತ್ತೇವೆ. ಎನ್‌ಪಿಎಸ್‌ ನೌಕರರ ಹೋರಾಟದ ವಿರುದ್ಧ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೂಪಿಸಿರುವ ಸಂಚಿದು. ಇದಕ್ಕೆ ನಾವು ಧಿಕ್ಕಾರ ಕೂಗುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...