Homeಮುಖಪುಟಆರೋಪಿಗಳನ್ನು ರಕ್ಷಿಸಲು ಪೊಲೀಸರ ಮೇಲೆ ಹಲ್ಲೆ; ಬಿಜೆಪಿ ಸಂಸದನ ವಿರುದ್ಧ ಎಫ್‌ಐಆರ್‌

ಆರೋಪಿಗಳನ್ನು ರಕ್ಷಿಸಲು ಪೊಲೀಸರ ಮೇಲೆ ಹಲ್ಲೆ; ಬಿಜೆಪಿ ಸಂಸದನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಕನೌಜ್‌ನ ಬಿಜೆಪಿ ಸಂಸದ ಸುಬ್ರತ್ ಪಾಠಕ್ ಮತ್ತು ಇತರ 51 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ‘ಪಿಟಿಐ’ ಭಾನುವಾರ ವರದಿ ಮಾಡಿದೆ.

ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಐವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಪೊಂದು ದಾಳಿ ನಡೆಸಿದ ನಂತರ ಮೂವರು ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ.

ಮಂಡಿ ಸಮಿತಿ ಪೊಲೀಸ್ ಔಟ್‌ಪೋಸ್ಟ್‌ನ ಪ್ರಭಾರಿ ಹಕೀಮ್ ಸಿಂಗ್ ಅವರು ನೀಡಿದ ದೂರಿನ ಆಧಾರದಲ್ಲಿ ಸಂಸದ ಪಾಠಕ್ ಮತ್ತು ಇತರರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಕನೌಜ್‌ನಲ್ಲಿದ್ದ ಉನ್ನಾವೋ ಪೊಲೀಸರೊಂದಿಗೆ ಮಾತುಕತೆ ನಡೆಸಿ ಅಪಹರಣ ಪ್ರಕರಣವೊಂದರ ತನಿಖೆಗಾಗಿ ಪೊಲೀಸರು ಶುಕ್ರವಾರ ರಾತ್ರಿ ಐವರನ್ನು ವಶಕ್ಕೆ ತೆಗೆದುಕೊಂಡಿದ್ದರು ಎಂದು ಹಕೀಮ್ ಸಿಂಗ್‌ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಐವರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡ ತಕ್ಷಣ, ಒಬ್ಬ ವ್ಯಕ್ತಿ ಪೊಲೀಸ್ ಔಟ್‌ಪೋಸ್ಟ್‌ಗೆ ತಲುಪಿ ತಮ್ಮವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದನು. ಸುಮಾರು 15 ನಿಮಿಷಗಳ ನಂತರ, ಸಂಸದ ಪಾಠಕ್ ಕೂಡ ಪೊಲೀಸ್ ಔಟ್‌ಪೋಸ್ಟ್‌ಗೆ ಬಂದರು.

ಬಿಜೆಪಿ ಸಂಸದ ಪಾಠಕ್‌ ಪೊಲೀಸ್ ಅಧಿಕಾರಿ ಹಕೀಮ್‌ ಸಿಂಗ್ ಅವರ ಕೊರಳಪಟ್ಟಿಯನ್ನು ಹಿಡಿದರು. ಹಕೀಮ್ ಅವರನ್ನು ರಕ್ಷಿಸಲು ಇತರ ಸಹೋದ್ಯೋಗಿಗಳು ಪ್ರಯತ್ನಿಸಿದಾಗ, 40 ಕ್ಕೂ ಹೆಚ್ಚು ಜನರ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿ ಅವರ ಸಮವಸ್ತ್ರವನ್ನು ಹರಿದು ಹಾಕಿತು ಎಂದು ‘ಪಿಟಿಐ’ ವರದಿ ತಿಳಿಸಿದೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ ಜಯಂತಿ ಮಾಡ್ತೀಯಾ?’: ದಲಿತ ಯುವಕನ ಭೀಕರ ಹತ್ಯೆ

ಗಲಭೆ, ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಪರಾಧಿಯನ್ನು ಪೊಲೀಸ್ ಕಸ್ಟಡಿಯಿಂದ ಬಲವಂತವಾಗಿ ಬಿಡುಗಡೆ ಮಾಡಲು ಪ್ರಯತ್ನಿಸುವುದು ಸೇರಿದಂತೆ ಹಲವು ಆರೋಪಗಳನ್ನು ಪಾಠಕ್ ಮತ್ತು ಇತರ ಆರೋಪಿಗಳ ವಿರುದ್ಧ ಹೊರಿಸಲಾಗಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಪ್ರತಿಕ್ರಿಯಿಸಿದ್ದು ಸಂಸದ ಪಾಠಕ್ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

“ಕನೌಜ್‌ನ ಬಿಜೆಪಿ ಸಂಸದ ಸುಬ್ರತ್ ಪಾಠಕ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪಾಠಕ್‌ ಅವರನ್ನು ಯಾವಾಗ ಬಂಧಿಸಲಾಗುವುದು ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ. ಈ ಬಿಜೆಪಿಯವರಿಂದ ತಪ್ಪಿಸಿಕೊಳ್ಳಲು ಪೊಲೀಸರು ಬುಲ್ಡೋಜರ್‌ಗಳ ಹಿಂದೆ ಅಡಗಿಕೊಂಡು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೇ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...