Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...