Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...