Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...